ಸ್ಕೂಲ್ ಬಸ್ ವೊಂದು ಬಿಎಂಟಿಸಿ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಯಲಹಂಕದ ಶೇಷಾದ್ರಿಪುರಂ ಕಾಲೇಜು ಬಳಿ ನಡೆದಿದೆ.
ಅವಲಹಳ್ಳಿ ಪ್ರೆಸಿಡೆನ್ಸಿ ಶಾಲಾ ಬಸ್ , ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದಾರೆ. ಘಟನೆ ವೇಳೆ ಕೇವಲ ಇಬ್ಬರು ವಿದ್ಯಾರ್ಥಿಗಳು ಮಾತ್ರ ಬಸ್ ನಲ್ಲಿದ್ದರು ಎನ್ನಲಾಗಿದೆ. ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಶಾಲಾ ಬಸ್ ಚಾಲಕ ಮಂಜುನಾಥ್ ಅವರ ಕಾಲು ಮುರಿತಕ್ಕೊಳಗಾಗಿದೆ. ಯಲಹಂಕ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.