ಲವ್ ಬ್ರೇಕಪ್: ಮಂಗಳಮುಖಿಗೆ ಚಾಕು ಇರಿದ ಯುವಕ!

Date:

 

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ. ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದು, ಮಂಡ್ಯದ ಆದಿಲ್‌ (23) ಚಾಕು ಇರಿದ ವ್ಯಕ್ತಿಯಾಗಿದ್ದಾನೆ. ಕಳೆದ ಆರು ತಿಂಗಳಿಂದ ಹನೀಷಾ ಹಾಗೂ ಆದಿಲ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಹನೀಷಾ, ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸದ ಆದಿಲ್‌, ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದನು. ಇದರಿಂದ ಬೇಸತ್ತು ಪ್ರೇಮ ನಿರಾಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆದಿಲ್ ಚಾಕುವಿನಿಂದ ಇರಿದಿದ್ದಾನೆ. ಇನ್ನು ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...