No menu items!
23.4 C
Munich
Saturday, May 2, 2026

ಲವ್ ಬ್ರೇಕಪ್: ಮಂಗಳಮುಖಿಗೆ ಚಾಕು ಇರಿದ ಯುವಕ!

Must read

 

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ. ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದು, ಮಂಡ್ಯದ ಆದಿಲ್‌ (23) ಚಾಕು ಇರಿದ ವ್ಯಕ್ತಿಯಾಗಿದ್ದಾನೆ. ಕಳೆದ ಆರು ತಿಂಗಳಿಂದ ಹನೀಷಾ ಹಾಗೂ ಆದಿಲ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಹನೀಷಾ, ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸದ ಆದಿಲ್‌, ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದನು. ಇದರಿಂದ ಬೇಸತ್ತು ಪ್ರೇಮ ನಿರಾಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆದಿಲ್ ಚಾಕುವಿನಿಂದ ಇರಿದಿದ್ದಾನೆ. ಇನ್ನು ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -spot_img

More articles

- Advertisement -spot_img

Latest article