ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಮಹತ್ವದ ಸ್ಥಾನ ಸಿಕ್ಕಿದೆ. ಈ ಮೂಲಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮಾಸ್ಟರ್ ಸ್ಟ್ರೋಕ್ ಎಂಬಂತೆ ಬಿಎಸ್ವೈ ಅವರಿಗೆ ಹೈಕಮಾಂಡ್ ಸ್ಥಾನ ನೀಡಿದೆ. ಕೇಂದ್ರ ಚುನಾವಣೆ ಸಮಿತಿಯಲ್ಲೂ ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದೆ. ಚುನಾವಣೆಯ ಸಮಯದಲ್ಲಿ ಟಿಕೆಟ್ ಹಂಚಿಕೆ ಸೇರಿದಂತೆ ಮಹತ್ವದ ತೀರ್ಮಾನಗಳನ್ನು ಈ ಸಮಿತಿ ಕೈಗೊಳ್ಳುತ್ತದೆ.
ವಿಧಾನಸಭಾ ಚುನಾವಣೆ ಹತ್ತಿರ ಇರುವಂತೆ ಬಿಜೆಪಿಯ ಸಂಸದೀಯ ಮಂಡಳಿ ಪುನಾರಚನೆಯಾಗಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ ನಂತರ ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದೆ. ವಿಧಾನಸಭಾ ಚುನಾವಣೆ ಹತ್ತಿರ ಇರುವಂತೆ ಬಿಜೆಪಿಯ ಸಂಸದೀಯ ಮಂಡಳಿ ಪುನಾರಚನೆಯಾಗಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ ನಂತರ ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದೆ.