ಬಸ್ ತಂಗುದಾಣದ 2 ಚಿಕ್ಕ ಗೋಪುರಗಳ ತೆರವು

Date:

ಅರಮನೆ ನಗರಿ ಮೈಸೂರಲ್ಲಿ ಭಾರೀ ವಿವಾದಕ್ಕೀಡಾಡಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ 2 ಚಿಕ್ಕ ಗೋಪುರಗಳನ್ನ ತೆರವು ಮಾಡಲಾಗಿದೆ. ಮೈಸೂರು-ಊಟಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಬಸ್ ತಂಗುದಾಣ ಮೇಲಿದ್ದ 2 ಗೋಪುರದ ಕುರುಹು ಇಲ್ಲದಂತೆ ಮಾಡಲಾಗಿದೆ.

ಗುಂಬಜ್ ಮಾದರಿ ನಿರ್ಮಿಸಲಾಗಿದ್ದು, ಕೂಡಲೇ ತಂಗುದಾಣ ತೆರವು ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಪಟ್ಟು ಹಿಡಿದಿದ್ದರು. ಇದಕ್ಕೆ ಸ್ಪಷ್ಟನೆ ನೀಡಿದ ಶಾಸಕ ರಾಮದಾಸ್, ಇದು ಗುಂಬಸ್ ಮಾದರಿ ಅಲ್ಲ ಎಂದು ಟಾಂಗ್ ನೀಡಿದ್ದರು.

 

ಈ ಮಧ್ಯೆ ತಂಗುದಾಣ ತೆರವಿಗೆ ಮೈಸೂರು ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್ ನೀಡಿತ್ತು. ಉಭಯ ನಾಯಕ ಮಧ್ಯೆ ವಾಗ್ಯುದ್ಧ ನಡೆಯುತ್ತಿದ್ದ ಬೆನ್ನಲ್ಲೇ ಈ ಬಗ್ಗೆ ವಿವಾದ, ಚರ್ಚೆ ಮಾಡದಂತೆ BJP ಹೈಕಮಾಂಡ್ ಬ್ರೇಕ್ ಹಾಕಿತ್ತು. ಇದೆಲ್ಲದರ ಮಧ್ಯೆ ರಾತ್ರೋರಾತ್ರಿ ತಂಗುದಾಣದ ಮೇಲಿದ್ದ 2 ಗೋಪುರ ತೆರವು ಮಾಡಲಾಗಿದೆ. ಜೊತೆಗೆ ನನಗೆ ವಿವಾದಕ್ಕಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಶಾಸಕ S.A.ರಾಮದಾಸ್ ಸ್ಪಷ್ಟನೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...