ಕಾರಿನ ಬಾನೆಟ್, ಮಿರರ್ ಡ್ಯಾಮೇಜ್: ರಾಜಧಾನಿ ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ ಕೇಸ್!

Date:

ಕಾರಿನ ಬಾನೆಟ್, ಮಿರರ್ ಡ್ಯಾಮೇಜ್: ರಾಜಧಾನಿ ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ ಕೇಸ್!

ಬೆಂಗಳೂರು:- ವೈಟ್ ಪಿಲ್ಡ್​​ನ ಐಟಿಪಿಎಲ್ ಮುಖ್ಯರಸ್ತೆಯಲ್ಲಿ ಕಾರು ಟಚ್​​​ ಆಯ್ತು ಅಂತ ಇಬ್ಬರು ಚಾಲಕರ ಮಧ್ಯೆ ಗಲಾಟೆ ನಡೆದಿರುವ ಘಟನೆ ಜರುಗಿದೆ. ಈ ಘಟನೆ ಸೆಪ್ಟಂಬರ್ 5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಧನುಶ್​​ ಎಂಬುವರು ಶಾಂತಿನಿಕೇತನ ಅಥವಾ ಬಿಗ್ ಬಜಾರ್ ಸ್ಟಾಪ್ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಹೆಚ್ಚಿನ ಟ್ರಾಫಿಕ್​ ನಡುವೆಯೇ ಧನುಶ್​ ಅವರು ಎದುರಿಗಿದ್ದ ಕಾರನ್ನು ಓವರ್​ ಟೆಕ್ ಮಾಡಲು ಮುಂದಾಗಿದ್ದಾರೆ. ಆದರೆ, ಕಾರು​​ ಚಾಲಕ ಇವರಿಗೆ ದಾರಿ ಬಿಡಲಿಲ್ಲ. ಕೊನೆಗೆ ಧನುಶ್ ಕಾರನ್ನು​ ಅನ್ನು ಓವರ್​ ಟೆಕ್​ ಮಾಡಿ ಮುಂದೆ ಹೋಗಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಧನುಶ್​ ಅವರನ್ನೇ ಹಿಂಬಾಲಿಸಿಕೊಂಡು ಬಂದ ಕಾರು ಚಾಲಕ ಓವರ್​ ಟೆಕ್​​ ಮಾಡಿ ಧನುಶ್ ಅವರನ್ನು ಅಡ್ಡ ಹಾಕಿದ್ದಾನೆ

ಕಾರಿನಿಂದ ಇಳಿದು ಧನುಶ್ ಅವರ ಬಳಿಗೆ ಬಂದು, ನಿನ್ನ ಕಾರು ನನ್ನ ಕಾರಿಗೆ ಟಚ್​ ಆಗಿದೆ ಎಂದು ಜಗಳ ತೆಗೆದಿದ್ದಾನೆ. ಆಗ ಧನುಶ್​ ಪೊಲೀಸ್​ ಠಾಣೆಗೆ ಹೋಗೋಣ ನಡಿ ಎಂದಿದ್ದಾರೆ. ಧನುಶ್​ ಅವರ ಮಾತು ಆಲಿಸದ ಕಾರು ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೇ ಕಾರಿನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಬಳಿಕ ಧನುಶ್​ ಅವರ ಕಾರಿನ ಕಿಟಕಿಯ ಮೂಲಕ ಒಳಗೆ ಕೈ ಹಾಕಿ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾನೆ. ಆಗ ಧನುಶ್​ ಪೆಪ್ಪರ್ ಸ್ಪ್ರೇನಿಂದ ಕಾರು ಚಾಲಕನಿಗೆ ಸ್ಪ್ರೇ ಮಾಡಿದ್ದಾರೆ

ಬಳಿಕ, ಕಾರು ಚಾಲಕ ತನ್ನ ಕಾರಿನಲ್ಲಿದ್ದ ಸ್ಕ್ರೂ ಡೈವ್ ತಂದು ಕಿಟಕಿಯ ಗ್ಲಾಸಗೆ 3-4 ಬಾರಿ ಹೊಡೆದಿದ್ದಾನೆ. ಬಳಿಕ‌, ಸ್ಕ್ರೂ ಡೈವ್ ಮೂಲಕ ಕಾರಿನ ಬಾನೆಟ್, ಮಿರರ್ ಡ್ಯಾಮೇಜ್ ಮಾಡಿದ್ದಾನೆ. ಕೊನೆಗೆ ಧನುಶ್ ಮನೆಗೆ ಹೋಗಿ ತಮ್ಮ ಕಾರನ್ನು ಚೆಕ್​ ಮಾಡಿದಾಗ, ಕಾರಿನ ಮೇಲೆ ಯಾವುದೇ ಸ್ಕ್ರ್ಯಾಚ್ ಇರಲಿಲ್ಲ.​​​ ಕಾರು ​ಚಾಲಕ ಬೇಕಂತಲೇ ಈ ರೀತಿ ಮಾಡಿದ್ದಾನೆ ಎಂದು ಎಕ್ಸ್​​ನ ಸಿಟಿಜನ್ಸ್​ ಮೂಮೆಂಟ್ಸ್​, ಈಸ್ಟ್​​ ಬೆಂಗಳೂರು ಎಕ್ಸ್​​ ಖಾತೆಯಲ್ಲಿ ಬರೆಯಲಾಗಿದೆ. ಘಟನೆಯ ಎಲ್ಲ ದೃಶ್ಯಗಳು ಧನುಶ್​ ಅವರ ಕಾರಿನ ಡ್ಯಾಶ್ ಕ್ಯಾಮೆರದಲ್ಲಿ ಸೆರೆಯಾಗಿದೆ.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...