ಕಾರಿನ EMIಗಾಗಿ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ: ಯುವಕ ಬಂಧನ

Date:

ಕಾರಿನ EMIಗಾಗಿ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ: ಯುವಕ ಬಂಧನ

ಬೆಂಗಳೂರು: ಕಾರಿನ ಇಎಂಐ ಕಟ್ಟಲು ಹಣದ ಅಭಾವದಿಂದ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ನಡೆಸಿದ ಯುವಕನನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ ಕಳೆದ 25 ವರ್ಷಗಳಿಂದ ಮನೆಕೆಲಸ ಮಾಡುತ್ತಿದ್ದರು. ಮನೆ ಮಾಲೀಕರು ನಂಬಿಕೆಯ ಆಧಾರದಲ್ಲಿ ಆಕೆಗೆ ಅದೇ ಮನೆಯಲ್ಲಿ ವಾಸಿಸಲು ಅವಕಾಶ ನೀಡಿದ್ದರು.

ಮನೆ ಮಾಲಕಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ವಿಶ್ವಾಸದಿಂದ ಮನೆಯ ಮತ್ತೊಂದು ಬೀಗದ ಕೀಲಿಯನ್ನು ಮನೆಕೆಲಸದಾಕೆಗೆ ನೀಡಿದ್ದರು. ಶರತ್ ಆಗಾಗ ದೊಡ್ಡಮ್ಮನಿಗೆ ಊಟ ನೀಡಲು ಮನೆಗೆ ಬರುತ್ತಿದ್ದ. ಈ ವೇಳೆ ಮನೆ ಮಾಲೀಕರು ಹೊರಗಿದ್ದ ಸಂದರ್ಭವನ್ನು ಗಮನಿಸಿದ ಆತ, ದೊಡ್ಡಮ್ಮನಿಗೆ ತಿಳಿಯದಂತೆ ಆಕೆಯ ಬಳಿಯಿದ್ದ ಬೀಗದ ಕೀಲಿಯನ್ನು ಪಡೆದು ಕಳೆದ ವರ್ಷ ಅಕ್ಟೋಬರ್ 22ರಂದು ಕಳ್ಳತನ ಎಸಗಿದ್ದಾನೆ.

ಚಿನ್ನಾಭರಣ ಕಳುವಾದ ಬಳಿಕ ಮನೆ ಮಾಲೀಕರು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಾಥಮಿಕ ವಿಚಾರಣೆಯಲ್ಲಿ ಮನೆಕೆಲಸದಾಕೆ ಕೃತ್ಯದ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದ್ದರು. ನಂತರ ಆರೋಪಿಯನ್ನು ವಿಚಾರಣೆ ನಡೆಸಿದಾಗ, ಕಾರಿನ ಇಎಂಐ ಪಾವತಿಸಲು ಹಣದ ಕೊರತೆ ಇದ್ದುದರಿಂದ ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಬಂಧನದ ನಂತರವೇ ಈ ವಿಚಾರ ಆರೋಪಿಯ ದೊಡ್ಡಮ್ಮನಿಗೂ ತಿಳಿದುಬಂದಿದ್ದು, ಪ್ರಕರಣದಲ್ಲಿ ಆಕೆಯ ಯಾವುದೇ ಪಾತ್ರವಿಲ್ಲ ಎಂಬುದು ಪೊಲೀಸರ ತನಿಖೆಯಲ್ಲಿ ಸ್ಪಷ್ಟವಾಗಿದೆ. ಬಂಧಿತನಿಂದ 36 ಲಕ್ಷ ರೂ. ಮೌಲ್ಯದ 241 ಗ್ರಾಂ ಚಿನ್ನಾಭರಣ, 2.8 ಕೆ.ಜಿ. ಬೆಳ್ಳಿ ಹಾಗೂ 1.30 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಬಸವನಗುಡಿ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.

Share post:

Subscribe

spot_imgspot_img

Popular

More like this
Related

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ ಬೆಂಗಳೂರು: ಹಿರಿಯ ಪತ್ರಕರ್ತರು...

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸ್ನಾಯು ನೋವು: ಕಾರಣಗಳು ಮತ್ತು ತಡೆಗೆ ಸಲಹೆಗಳು

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸ್ನಾಯು ನೋವು: ಕಾರಣಗಳು ಮತ್ತು ತಡೆಗೆ ಸಲಹೆಗಳು ಬೆಂಗಳೂರು:...

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು:...

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು...