ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ…!

0
71

ಕಾವೇರಿ ನದಿ ನೀರಿನ ವಿವಾದದ ಕುರಿತಂತೆ ಇಂದು ನಡೆದ ವಿಚಾರಣೆ ವೇಳೆ ಸುಪ್ರೀಂ ಮಹತ್ವತ ತೀರ್ಪು ನೀಡುವ ಮೂಲಕ ಕರ್ನಾಟಕಕ್ಕೆ ಮತ್ತೊಂದು ಶಾಕ್ ನೀಡಿದೆ. ಕಾವೇರಿ ನದಿ ನೀರು ಕುರಿತಂತೆ ಮತ್ತೆ ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ತೀರ್ಪು ನೀಡಿದೆ. ಅಕ್ಟೋಬರ್ 1 ರಿಂದ 6ರ ವರೆಗೆ ತಮಿಳುನಾಡಿಗೆ ನೀರು ಬಿಡಲೇಬೇಕು ಎಂದು ಕೋರ್ಟ್ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಕಾವೇರಿ ನದಿ ವಿಷಯವಾಗಿ ಮುಂದಿನ ಮೂರು ದಿನಗಳೊಳಗಾಗಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಮಹತ್ವದ ತೀರ್ಪು ನೀಡಿದೆ.
ಇನ್ನು ಸುಪ್ರೀಂ ಕೋರ್ಟ್ ಆದೇಶ ವಿರುದ್ದವಾಗಿ ರಾಜ್ಯ ಸರ್ಕಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಖಡಕ್ ಎಚ್ಚರಿಕೆಯನ್ನು ಕೋರ್ಟ್ ನೀಡಿದೆ. ಅಲ್ಲದೇ ಪ್ರತಿಯೋದು ರಾಜ್ಯವೂ ಕೋರ್ಟ್‍ನ ಆದೇಶವನ್ನು ಪಾಲಿಸಲೇ ಬೇಕು ಎಂದು ಹೇಳಿಕೆ ನೀಡಿರುವ ಸುಪ್ರೀಂ ದ್ವೀ ಸದನ ಪೀಠವು ಆದೇಶ ಪಾಲಿಸದಿರುವ ಕರ್ನಾಟಕದಿಂದ ಕೋರ್ಟ್‍ಗೆ ಧಕ್ಕೆಯಾಗಿದೆ ಎಂದು ಹೇಳಿವೆ. ಇನ್ನು ಕೋರ್ಟ್ ಆದೇಶದಿಂದ ಪ್ರತೀ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿರುವ ಬೆನ್ನಲ್ಲೇ ಕಾವೇರಿ ನಿರ್ವಹಣಾ ಮಂಡಳಿ ರಚಿಸಿ ಎಂದು ಹೇಳಿಕೆ ನೀಡಿರುವುದರಿಂದ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದೆಂತಾಗಿದೆ. ಮುಂದಿನ ವಿಚಾರಣೆಯನ್ನು ಅ.೬ಕ್ಕೆ ಮುಂದೂಡಲಾಗಿದೆ.

Like us on Facebook  The New India Times

POPULAR  STORIES :

ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!

ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್‍ನ ಗೂಂಡಾಗಿರಿ..! Lady Conductor Fight

ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song

ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!

ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?

ಬಿಗ್ ಬಾಸ್ ಮನೆಯ ರಹಸ್ಯ ಲೀಕ್..!

ಜಿಯೋ ಕಾಲ್‍ಡ್ರಾಪ್ ಸಮಸ್ಯೆ: ಏರ್‍ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?

LEAVE A REPLY

Please enter your comment!
Please enter your name here