12 ಸಾವಿರ ಕ್ಯೂಸೆಕ್ಸ್ ನೀರು ಬಿಡಿ: ಸುಪ್ರೀಂ ಆದೇಶ…!

admin
By admin
1 Min Read

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಕುರಿತಾಗಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಅಂತಿಮ ತೀರ್ಪಿನ ಆದೇಶ ಹೊರ ಬಿದ್ದಿದ್ದು, ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆ ಇದ್ದು ಮುಂದಿನ ದಿನಗಳಲ್ಲಿ ಜನರಿಗೆ ಕುಡಿಯಲೂ ನೀರು ಸಿಗುವುದು ಕಷ್ಟವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಂದೆ ರಾಜ್ಯದ ಪರಿಸ್ಥತಿಯ ಬಗ್ಗೆ ಮನವರಿಕೆ ಮಡಿಕೊಂಡ ಹಿನ್ನಲೆಯಲ್ಲಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರ ಅವರ ವಿಭಾಗೀಯ ಪೀಠ ಇಂದು ಅರ್ಜಿ ಆದೇಶದ ತೀರ್ಪನ್ನು ನೀಡಿದ್ದು ಸೆಪ್ಟಂಬರ್ 20ರ ವರೆಗೆ ತಮಿಳುನಾಡಿಗೆ 12 ಕ್ಯೂಸೆಕ್ಸ್ ನೀರನ್ನು ಹರಿಸಬೇಕೆಂದು ಆದೇಶ ನಿಡಿದೆ. 15 ಸಾವಿರ ಕ್ಯೂಸೆಕ್ ಬದಲಿಗೆ 12 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಬೇಕೆಂದು ಆದೇಶ ನಿಡಿದ್ದರಿಂದ ರಾಜ್ಯ ದೊಡ್ಡ ಪ್ರಮಾಣದಲ್ಲಿ ಜಯ ಸಾಧಿಸಲು ವಿಫಲವಾಗಿದೆ. ಇನ್ನು 8 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡಬೇಕೆಂದಿರುವ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆ.20ಕ್ಕೆ ಮುಂದೂಡಿದೆ. ಇದರಿಂದ ಕಾವೇರಿ ನೀರು ಕುರಿತಂತೆ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.

POPULAR  STORIES :

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಗೆ ತೀವ್ರಗೊಂಡ ಆಕ್ರೋಶ..!

ತಮಿಳರಿಂದ #Wehatekarnataka ಟ್ವಿಟರ್ ಟ್ರೆಂಡ್…!

ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..

ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!

ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

Share This Article