ಕಾವೇರಿ ಜಲಾಶಯದಲ್ಲಿ ಉಳಿದಿರೋದು ಕೇವಲ 25 ಟಿಎಂಸಿ ನೀರು..!

Date:

ಕಾವೇರಿ ನೀರನ್ನು ತಮಿಳುನಾಡಿಗೆ ಸುಪ್ರೀಂ ಆದೇಶದ ಮೇರೆಗೆ ನಿರಂತರವಾಗಿ ನೀರು ಹರಿಸುತ್ತಿರುವ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ನೀರಿಗಾಗಿ ತೀವ್ರತರವಾದ ತೊಂದರೆಯನ್ನು ಅನುಭವಿಸಲು ಸಿದ್ದರಿರಬೇಕಾಗುತ್ತದೆ. ಅ.4 ರಂದು ಸುಪ್ರೀಂಕೋರ್ಟ್ ನೀಡಿದ್ದ ಆದೇಶದಂತೆ ಅ.1 ರಿಂದ 6ರ ವರೆಗೆ 3.1 ಟಿಎಂಸಿ ನೀರು ತಮಿಳುನಾಡಿಗೆ ಹರಿಬಿಡಲಾಗಿದ್ದು, ಬಳಿಕ ಅ.7ರಿಂದ ಪ್ರತಿದಿನ 2 ಸಾವಿರ ಕ್ಯೂಸೆಕ್ಸ್ ಲೆಕ್ಕಾಚಾರದಂತೆ ನೀರು ಹರಿ ಬಿಡಲಾಗ್ತಾ ಇದೆ. ಹೀಗಾಗಿ ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರು ಮಂಗಳವಾದದೊಳಗಾಗಿ 25.09 ಟಿಎಂಸಿಗೆ ಕುಸಿತ ಕಂಡಿದೆ. ಸುಮಾರು 8.58 ಟಿಎಂಸಿ ನೀರಷ್ಟು ತಮಿಳುನಾಡಿಗೆ ಹರಿದಿದೆ. ಸುಪ್ರೀ ಆದೇಶದ ಪಾಲನೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯಿಂದ ಮುಂದಿನ ದೊಡ್ಡ ಪರಿಣಾಮವನ್ನು ಎದುರಿಸಲು ಸಿದ್ದವಾಗಿ ನಿಂತಿದೆ. ಈಗಾಗಲೇ ಕಾವೇರಿ ಜಲಾಶಯಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದ್ದು, ಕಾವೇರಿ ನದಿ ನೀರಿನ ನಾಲ್ಕೂ ಜಲಾಶಯಗಳ ನೀರಿನ ಮಟ್ಟ 25 ಟಿಎಂಸಿಗೆ ಬಂದು ನಿಂತಿದೆ. ಇನ್ನು ಮಂದಿನ ಹಿಂಗಾರು ಮಳೆಯು ರಾಜ್ಯಕ್ಕೆ ಕೈಕೊಟ್ಟಲ್ಲಿ ಜಲಾಶಯಗಳಲ್ಲಿನ ನೀರು ಮುಂದಿನ ಮೇ ತಿಂಗಳವರೆಗೂ ಬರೋದು ಅನುಮಾನ ಎನ್ನಲಾಗುತ್ತಿದೆ.
ಇನ್ನು ಕೋರ್ಟ್ ಆದೇಶದಂತೆ 1 ರಿಂದ 6 ರವರೆಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ಸ್‍ನಂತೆ ಹಾಗೂ ಅ.7 ರಿಂದ ಪ್ರತಿ ದಿನ 2 ಸಾವಿರ ಕ್ಯೂಸೆಕ್ಸ್ ನೀರಿನಂತೆ ಒಟ್ಟು 24 ಸಾವಿರ ಕ್ಯೂಸೆಕ್ಸ್ ನೀರನ್ನು ಈ ತಿಂಗಳಲ್ಲಿ ತಮಿಳುನಾಡಿಗೆ ಹರಿಬಿಡಲಾಗಿದೆ. ರಾಜ್ಯದ ಜಲಾಯನ ಭಾಗಗಳಿಗೂ ನೀರು ಹರಿಸಲಾಗ್ತಾ ಇದ್ದು ಜಲಾಶದಗಳಿಂದ ಕನಿಷ್ಠಪಕ್ಷ 7.5 ರಿಂದ 7 ಟಿಎಂಸಿ ನೀರನ್ನು ಹರಿಬಿಡಲಾಗ್ತಾ ಈದೆ. ಕಾವೇರಿ ಕೊಳ್ಳದ ಒಳಹರಿವು ಹಾಗೂ ಹೊರ ಹರಿವಿನ ನಡುವೆ ಭಾರೀ ಅಂತರ ಏರ್ಪಟ್ಟಿದ್ದು ಕಾವೇರಿ ನದಿ ನೀರಿನ ಮಟ್ಟದಲ್ಲಿನ ಬದಲಾವಣೆಗೆ ಕಾರಣವಾಗ್ತಾ ಇದೆ ಎನ್ನುತ್ತಾರೆ ತಜ್ಞರು.

POPULAR  STORIES :

ಹುಡುಗಿಯೊಬ್ಳು ಐಫೋನ್ ತಗೊಳೋಕೆ ನಿಮ್ಮತ್ರ ದುಡ್ ಕೇಳುದ್ರೆ..?

Oxford ಇಂಗ್ಲೀಷ್ ಡಿಕ್ಷನರಿಯಲ್ಲಿ ದಕ್ಷಿಣ ಭಾರತದ ಎರಡು ಸಾಮಾನ್ಯ ಪದಗಳ ಸೇರ್ಪಡೆ..!

ಇನ್ನು ಕೆಲವೇ ದಿನಗಳಲ್ಲಿ ಶಿರಾಡಿ ಘಾಟ್ ಬಂದ್..!

ಏಳು ಸಾವಿರ ವರ್ಷಗಳ ಹಿಂದಯೇ ಏಲಿಯನ್ಸ್ ವಿಮಾನ ನಿಲ್ದಾಣ ನಿರ್ಮಿಸಿಕೊಂಡಿದ್ವು : ಇರಾಕ್ ಸಚಿವ..!

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...