ಇಂದು 2021- 22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರನ್ನು ಹಿಂದಿಕ್ಕಿದ ಬಾಲಕರು ಮೇಲುಗೈ ಸಾಧಿಸಿದ್ದಾರೆ. ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಇಂಜಿನಿಯರಿಂಗ್ನಲ್ಲಿ ಯಲಹಂಕದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯಾದ ಅಪೂರ್ವ ಮೊದಲ ಸ್ಥಾನ ಪಡೆದಿದ್ದಾರೆ. ಮಾರತಹಳ್ಳಿಯ ಶ್ರೀಚೈತನ್ಯ ಟೆಕ್ನೋ ಸ್ಕೂಲ್ನ ಸಿದ್ಧಾರ್ಥ್ ಸಿಂಗ್ ದ್ವಿತೀಯರಾಗಿದ್ದಾರೆ. ಇನ್ನೂ ಕೆಇಎ ವೆಬ್ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ.
Latest article
ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ: ಮುಂದುವರಿದ ತನಿಖೆ
ಹುಬ್ಳಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬೆಳಗ್ಗೆ ನಿರಂಜನ ಹಿರೇಮಠ ಅವರ ಮನೆಗೆ ಆಗಮಿಸಿದರು. ನಿರಂಜನ್ ಹಿರೇಮಠ ಮತ್ತು ಗೀತಾ ಹಿರೇಮಠ ಅವರನ್ನು...
ಕೆಎಸ್ ಈಶ್ವರಪ್ಪ ಅವರಿಗೆ ಸಲಹೆ ನೀಡುವಷ್ಟು ನಾನು ದೊಡ್ಡನಲ್ಲ: ಅಣ್ಣಾಮಲೈ
ಶಿವಮೊಗ್ಗ: ಜನತೆ ಈ ಬಾರಿ ಮೋದಿಗೆ ಹಾಕುವ ವೋಟು ಧನ್ಯವಾದ ಹೇಳುವ ವೋಟು ಎಂದು ಭಾವಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ
ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ನಗರದ ಸದಾಶಿವನಗರಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿದ್ದಾರೆ. ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ನಿವಾಸಕ್ಕೆ ಭೇಟಿ...