ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಗೃಹ ಸಚಿವರು ಹೇಳಿದ್ದೇನು ?

0
49

ಬೆಂಗಳೂರು : ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಚಂದ್ರಶೇಖರ್ ಗುರೂಜಿಯವರು ಇತ್ತೀಚಿಗೆ ಒಬ್ಬ ಉದ್ಯೋಗಿಯನ್ನು ಕೆಲಸದಿಂದ ತೆಗದಿದ್ದರು. ಇದೇ ವಿಚಾರಕ್ಕಾಗಿ ಸಿಟ್ಟುಕೊಂಡು ಆ ದ್ವೇಷದಲ್ಲಿ ಆತನೇ ಕೊಲೆ ಮಾಡಿರೋ ಶಂಕೆ ಇದೆ. ಕಚೇರಿಯ ಸಿಬ್ಬಂದಿಯೇ ಮೇಲ್ನೋಟಕ್ಕೆ ಹತ್ಯೆ ಮಾಡಿರೋದಾಗಿ ಶಂಕಿಸಲಾಗಿದೆ ಎಂದರು.

ಜನನ

 

 

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಬಗ್ಗೆಯೂ ಪೊಲೀಸರು ಸತ್ಯ ಪತ್ತೆ ಹಚ್ಚಲಿದ್ದಾರೆ. ಸದ್ಯಕ್ಕೆ ಕೊಲೆ ಹಿಂದಿನ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಇದೀಗ ಕೊಲೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಕೊಲೆ ಆರೋಪಿಗಳನ್ನು ಪತ್ತೆ ಹಚ್ಚೋ ಕೆಲಸವನ್ನು ಮಾಡುತ್ತಿದ್ದಾರೆ. ಹಂತಕರನ್ನು ಪತ್ತೆ ಹಚ್ಚಿ, ಶೀಘ್ರವೇ ಬಂಧಿಸಲಿದ್ದಾರೆ. ಎಲ್ಲಾ ಹಂತದಲ್ಲಿಯು ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here