ಮುಖ್ಯಮಂತ್ರಿಗಳು ಎಂದರೆ ಅವರ ಮೇಲಿನ ಜವಾಬ್ದಾರಿಯು ಅತಿ ದೊಡ್ಡ ಮಟ್ಟದಲ್ಲಿ ಇರುತ್ತದೆ. ಹಗಲು ರಾತ್ರಿ ಎನ್ನದೇ ರಾಜ್ಯದ ಜನರಿಗಾಗಿ ದುಡಿಯುತ್ತಲೇ ಇರಬೇಕಾಗುತ್ತದೆ. ಆದ್ದರಿಂದ ಜನರ ಮನಸ್ಸಿನಲ್ಲಿ ಮುಖ್ಯಮಂತ್ರಿಗಳ ಸಂಬಳವೂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಎಂದುಕೊಂಡಿರುತ್ತಾರೆ. ಆದರೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಅತೀ ಕಡಿಮೆ ಸಂಬಳ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇನ್ನೂ ಕೆಲ ಸಿಎಂಗಳು ಹೆಚ್ಚಿನ ಸಂಬಳ ಪಡೆಯುತ್ತಿದ್ದಾರೆ. ಇಷ್ಟಕ್ಕೂ ನಮ್ಮ ಮುಖ್ಯಮಂತ್ರಿಗಳ ಸಂಬಳ ಎಷ್ಟಿದೆ ಎಂಬುದು ಇಲ್ಲಿದೆ ನೋಡಿ..
ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾರವರು ತಿಂಗಳಿಗೆ ಒಂದು ರೂಪಾಯಿ ಅಥವಾ ಯಾವುದೇ ಹಣ ಪಡೆಯದೇ ಕೆಲಸ ಮಾಡುತ್ತಾರೆ..! ಹೌದು.. ತಮಿಳುನಾಡಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅಮ್ಮ ಎಂದೇ ಪ್ರಸಿದ್ಧಿ ಪಡೆದಿರುವ ಜಯಲಲಿತಾರವರು ಯಾವುದೇ ರೀತಿಯ ಸಂಬಳ ಪಡೆಯದೇ ಕಾರ್ಯ ನಿರ್ವಹಿಸುತ್ತಾರೆ ಎಂದರೆ ನಂಬಲೇಬೇಕು.
ಅತೀ ಕಡಿಮೆ ಸಂಬಳ ಪಡೆಯುವ ಸಿಎಂಗಳ ಪಟ್ಟಿಯಲ್ಲಿ 9,200 ರೂಪಾಯಿ ಸಂಬಳ ಪಡೆಯುವ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಎರಡನೇ ಸ್ಥಾನದಲ್ಲಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ 16,000 ರೂಪಾಯಿ ವೇತನ ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ್ ಇದ್ದಾರೆ. ಈ ಇಬ್ಬರೂ ಮುಖ್ಯಮಂತ್ರಿಗಳು 20,000 ರೂಪಾಯಿ ವೇತನ ಪಡೆಯುತ್ತಾರೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿ ತಿಂಗಳು 30,000 ರೂಪಾಯಿ ವೇತನ ಪಡೆಯುವ ಮೂಲಕ ಹತ್ತನೇ ಸ್ಥಾನದಲ್ಲಿದ್ದಾರೆ.
ಅತಿ ಹೆಚ್ಚು ವೇತನ ಪಡೆಯುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಪಂಜಾಬ್ ನ ಪ್ರಕಾಶ್ ಸಿಂಗ್ ಬಾದಲ್ ಇದ್ದಾರೆ. ಅವರು ತಿಂಗಳಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ವೇತನ ಪಡೆಯುತ್ತಾರೆ. ಬಿಹಾರದ ನಿತೀಶ್ ಕುಮಾರ್ ರವರು 99,500 ರೂಪಾಯಿ ವೇತನ ಪಡೆಯುವ ಮೂಲಕ ಅತಿ ಹೆಚ್ಚು ವೇಥನ ಪಡೆಯುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನುಳಿದಂತೆ ಇತರ ಸಿಎಂಗಳ ವೇತನ ಹೀಗಿದೆ.
ರಾಜ್ಯ ಮುಖ್ಯಮಂತ್ರಿ ವೇತನ
- ರಾಜಶೇಖರ ಜೆ
Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : [email protected]
POPULAR STORIES :
ಕನ್ನಡಿಗರು ನೋಡಲೇಬೇಕಾದ ಕಿರುಚಿತ್ರ `ಪ್ರೆಸೆಂಟ್ ಸಾರ್’ ಕನ್ನಡದ ಶಾಲೆಗಳ ಪರಿಸ್ಥಿತಿ ಏನಾಗಿದೆ ಅಂತ ನೀವೇ ನೋಡಿ..!
ನಾನು ಹೆಮ್ಮೆಯ ಕನ್ನಡಿಗ ತಂಡ ನಮ್ಮ ಮೆಟ್ರೋಗೆ ಶಂಕರ್ ನಾಗ್ ರವರ ಹೆಸರಿಡಬೇಕೆಂದು ಪಿಟಿಷನ್ ಶುರು ಮಾಡಿದೆ..!
ಈ ಗ್ರಾಮ ಇಡೀ ಜಗತ್ತಿಗೇ ಮಾದರಿ..! ಹೆಣ್ಣನ್ನು ದ್ವೇಷಿಸುವವರು ಇದನ್ನು ಓದಲೇಬೇಕು..!
ವರುಣರಾಯ ನಿಲ್ಲಿಸು ನಿನ್ನ ಆರ್ಭಟವ..! ತಮಿಳುನಾಡಿನ ಪರಿಸ್ಥಿತಿ ಹೇಗಿದೆ ಅಂತ ನೀವೆ ನೋಡಿ..!
ಅವನಿಗೆ ಉಗ್ರನೆಂಬ ಹಣೆಪಟ್ಟಿ ಕಟ್ಟುತ್ತಿದ್ದರು..! ಟೈಮ್ ಸರಿ ಇಲ್ಲ ಅಂದ್ರೆ ಅಷ್ಟೇ….
ಬಿಗ್ ಬಾಸ್ ಮನೆಯಿಂದ ಹೊರಬಂದ ವೆಂಕಟ್ ಏನಂದ್ರು ಗೊತ್ತಾ..?!
ಇಂಗ್ಲೆಂಡಿನಲ್ಲಿ `ಇಮ್ರಾನ್ ಖಾನ್’ರನ್ನು ಹೊಗಳಿದ ನರೇಂದ್ರ ಮೋದಿ..! ಆ ಇಮ್ರಾನ್ ಖಾನ್ ಯಾರುಗೊತ್ತೇ..?!
ಕರ್ನಾಟಕ ಸರ್ಕಾರಕ್ಕೆ ಜನಸಾಮಾನ್ಯನ ಪ್ರಶ್ನೆಗಳು..! ಕನಿಷ್ಟ ಕಾಕತಾಳೀಯ ಅಂತಾದ್ರೂ ಹೇಳಿ..! ಸಮಾಧಾನ ಮಾಡ್ಕೋತೀವಿ..!
ಊಟಕ್ಕೆ ಆರ್ಡರ್ ಮಾಡಿದವಳು ಬೆಂಗಳೂರನ್ನೇ ಬಿಟ್ಟು ಹೋಗಿದ್ದೇಕೆ..?
ಕನ್ನಡ ನಾಡು, ನುಡಿಯ ಬಗ್ಗೆ ಗೊತ್ತೇ ಇಲ್ಲದವರು ಬೆಂಗಳೂರಲ್ಲೇ ಇದ್ದಾರೆ..! ವರನಟ ಡಾ.ರಾಜಕುಮಾರ್ ಅವರನ್ನೇ ಗುರುತಿಸದವರು