ಲಂಚ ಸ್ವೀಕರಿಸಿ ಎಸ್ಕೇಪ್ ಆದ ಖತರ್ನಾಕ ಇನ್ಸ್ ಪೆಕ್ಟರ್

Date:

ಬೆಂಗಳೂರು: ಲಂಚದ ಆಸೆಗೆ ಬಿದ್ದು ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್ ಗಳು ಓಡಿ ಹೋಗಿದ್ದು, ಇದೀಗ ಮೂರನೇ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್ ಪರಾರಿಯಾಗಿದ್ದಾರೆ. ಇನ್‌ಸ್ಪೆಕ್ಟರ್ ಹೆಸರಿನಲ್ಲಿ ಲಂಚ ಸ್ವೀಕರಿಸಿದ ಪೊಲೀಸ್ ಕಾನ್‌ಸ್ಟೇಬಲ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ಚಿಕ್ಕಜಾಲ ಠಾಣೆಯಿಂದ ಎಸ್ಕೇಪ್ ಆಗಿರುವ ಇನ್‌ಸ್ಪೆಕ್ಟರ್ ಪ್ರವೀಣ್ ಮಹೇಶ್ವರಪ್ಪ. ಲಂಚ ಪ್ರಕರಣದಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆ ತೊರೆದ ಮೂರನೇ ಇನ್‌ಸ್ಪೆಕ್ಟರ್ ಆಗಿದ್ದಾರೆ .

ಗುತ್ತಿಗೆದಾರ ಪ್ರಕಾಶ್ ಎಂಬುವರ ಮೇಲೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಪ್ರಕರಣದಲ್ಲಿ ತ್ವರಿತವಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಹಾಗೂ ಪ್ರಕಾಶ್ ಅವರ ತಂದೆ ತಾಯಿ ಹಾಗೂ ಸಂಬಂಧಿಕರ ಹೆಸರು ಸೇರಿಸದೇ ಇರಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ಲಕ್ಷ ರೂ. 65 ಸಾವಿರ ರೂ.ಗಳನ್ನು ಹೆಡ್ ಕಾನ್‌ಸ್ಟೇಬಲ್ ರವಿ ಮೂಲಕ ಸ್ವೀಕರಿಸಿದ್ದರು. ಈಗ ರವಿ ಜೈಲಿನ ಅಥಿತಿಯಾಗಿದ್ದಾನೆ .

ಆ ಬಳಿಕ ಮತ್ತೆ ಐದು ಲಕ್ಷ ರೂ. ಲಂಚ ನಿಡುವಂತೆ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಹಣವನ್ನು ನೀಡದಿದ್ದಕ್ಕೆ ಗುತ್ತಿಗೆದಾರ ಪ್ರಕಾಶ್ ಅವರ ಪೋಷಕರಿಗೆ ಹಾಗೂ ಬಾಮೈದನಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಲಂಚ ನೀಡಲು ಇಷ್ಟವಿಲ್ಲದ ಕಾರಣ ಗುತ್ತಿಗೆದಾರನ ಸಂಬಂಧಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ಲಂಚ ತರುವಂತೆ ಕರೆ ಮಾಡಿ ಹೇಳಿದ್ದ ಪೇದೆ ರವಿ ಕುಮಾರ್, ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಇದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆ ಬಳಿ ಕರೆಸಿಕೊಂಡಿದ್ದಾನೆ. ಲಂಚದ ಹಣ ಸ್ವೀಕರಿಸಿ ಇನ್ನೇನು ಲೋಕಾ ಬಲೆಗೆ ಬೀಳುವ ಮುನ್ನ ಕಾನ್‌ಸ್ಟೇಬಲ್ ರವಿ ಎಚ್ಚೆತ್ತುಕೊಂಡಿದ್ದಾನೆ. ಲಂಚ ಕೊಡಲು ಹೋಗಿದ್ದ ವ್ಯಕ್ತಿಗೆ ಬಂದ ಕರೆಯ ನಂಬರ್ ನ್ನು ಟ್ರೂ ಕಾಲರ್ ಆಪ್ ನಲ್ಲಿ ನೋಡಿ ಎಸಿಬಿ ಪೊಲೀಸ್ ಎಂದು ಹೆದರಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಅಚ್ಚರಿ ಏನೆಂದರೆ ಈ ಲಂಚ ಸ್ವೀಕರಿಸುವ ಮುನ್ನವೇ ಪೋನ್ ಪೇ ಮೂಲಕ ಹತ್ತು ಸಾವಿರ ಲಂಚದ ಹಣವನ್ನು ಮೂರನೇ ವ್ಯಕ್ತಿಯ ಮೊಬೈಲ್ ಗೆ ಹಾಕಿಸಿಕೊಂಡು ಲಂಚ ಪಡೆದುಕೊಂಡಿದ್ದ. ಸಾಕ್ಷಾಧಾರಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು ಕಾನ್‌ಸ್ಟೇಬಲ್ ರವಿಯನ್ನು ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಬಂಧನ ಆಗುತ್ತಿದ್ದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್ ಪರಮೇಶ್ವರಪ್ಪ ಅವರ ಎರಡು ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದ್ದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರವೀಣ್ ಅವರು ನಿರೀಕ್ಷಣಾ ಜಾಮೀನು ಪಡೆಯುವ ಸಲುವಾಗಿ ಠಾಣೆಗೆ ಹಾಜರಾಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ...

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ ಬೆಂಗಳೂರು:...

ಕೇಂದ್ರ ಅನುಮತಿ ಸಿಕ್ಕರೆ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಕೇಂದ್ರ ಅನುಮತಿ ಸಿಕ್ಕರೆ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ: ಡಿ.ಕೆ....