ಪೋಷಕರು ಪ್ರೀತಿ ಒಪ್ಪಲಿಲ್ಲ, ಪ್ರೇಮಿಗಳು ಉಳಿಯಲಿಲ್ಲ…!

Date:

ಪೋಷಕರಿಂದ ತಮ್ಮ ಪ್ರೀತಿಗೆ ಗ್ರೀನ್ ಸಿಗ್ನಲ್ ಸಿಗಲಿಲ್ಲ ಅಂತ ಪ್ರೇಮಿಗಳು ಕಾಡಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.


ಮಾನಸ (18) ಮತ್ತು ರಂಗಸ್ವಾಮಿ (19) ಆತ್ಮಹತ್ಯೆ ಮಾಡ್ಕೊಂಡ ಪ್ರೇಮಿಗಳು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿ.ವಿ ಪುರ ಅರಣ್ಯ ಪ್ರದೇಶದಲ್ಲಿ ಈ ಯುವ ಪ್ರೇಮಿಗಳು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಮೃತೆ ಮಾನಸ ಮಾಯಸಂದ್ರ ಗ್ರಾಮದ ನಿಜಲಿಂಗಪ್ಪ ಅವರ ಮಗಳು, ರಂಗಸ್ವಾಮಿ ಭರಮಗಿರಿಯ ಕರಿಯಪ್ಪ ಅವರ ಎಂದು ತಿಳಿದುಬಂದಿದೆ.


ಮಾನಸ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ರಂಗಸ್ವಾಮಿ ದ್ವಿತಿಯ ಪಿಯುಸಿ ವ್ಯಾಸಗಂಗ ಮಾಡುತ್ತಿದ್ದ.
ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಇಬ್ಬರ ವಯಸ್ಸು ಚಿಕ್ಕದು ಹಾಗೂ ಅಂತರ್ಜಾತಿ ಎಂಬ ಕಾರಣಕ್ಕೆ ಇಬ್ಬರ ಪೋಷಕರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇದರಿಂದ ನೊಂದ ಮಾನಸ ಮತ್ತು ರಂಗಸ್ವಾಮಿ ವಿ.ವಿ ಪುರ ಅರಣ್ಯ ಪ್ರದೇಶಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...