ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ನಾಳೆ ಕರಾವಳಿ ಜಿಲ್ಲೆಗಳ `ಮಳೆಹಾನಿ ಪ್ರದೇಶಗಳಿಗೆ `ಭೇಟಿ ನೀಡುತ್ತೇನೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಆರ್ ಟಿ ಜೊತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಸಿಎಂ ಪ್ರವಾಸ ಮಾಡಲಿದ್ದಾರೆ.
ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲಿಯೇ ಸೂಚನೆ ನೀಡುತ್ತೇನೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.