ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ

Date:

ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್‌ಗಳ ಮೇಲೆ ತೋರಿಸುತ್ತಿದೆ. ಕೈಲಾಗದವರು ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೇ ಬಿಜೆಪಿ ಎಂದು ಪ್ರಶ್ನಿಸಿದೆ. ಇನ್ನೂ 40% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎಂಬ ಪಾಲಾಯನವಾದಿ ಮಾತುಗಳನ್ನಾಡುವ PayCM ಬಸವರಾಜ ಬೊಮ್ಮಾಯಿ ಅವರೇ, ಕಳೆದ ಜನವರಿಯಲ್ಲೇ ಲೋಕಾಯುಕ್ತ ವರದಿ ನೀಡಿದ್ದನ್ನು ಮರೆಮಾಚುತ್ತಿರುವುದೇಕೆ? #40percentsarkara ದ ಕಮಿಷನ್ ಕರ್ಮದ ಬಗೆಗಿನ ಆ ವರದಿ ಏನಾಯ್ತು? ಲೋಕಾಯುಕ್ತ ನೀಡಿದ ಆ ವರದಿಯನ್ನು ಬಹಿರಂಗಗೊಳಿಸಲು ಭಯವೇಕೆ? ಅದು ನಿಮಗೆ ದಾಖಲೆಯಲ್ಲವೇ? ಎಂದು ಕಾಂಗ್ರೆಸ್ ಹೇಳಿದೆ

Share post:

Subscribe

spot_imgspot_img

Popular

More like this
Related

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ ನೋಡಿ

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ...

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...