ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ

Date:

ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಬಿಜೆಪಿ ಜೊತೆ ಸೇರಿ ಚಲುವರಾಯಸ್ವಾಮಿ ಮಂಡ್ಯ ವ್ಯವಸ್ಥೆಗಳನ್ನ ಹಾಳು ಮಾಡಿದ್ದಾರೆ. ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 9 ಸಾವಿರ ಕೋಟಿ ರೂ. ಕೊಟ್ರು. ಆ ಅನುದಾನ ವಾಪಸ್ ಹೋಗಲಿಕ್ಕೆ ಚಲುವರಾಯಸ್ವಾಮಿ ಕಾರಣ. ಬಿಜೆಪಿ ಜೊತೆ ಸೇರಿ ವ್ಯವಸ್ಥೆಗಳನ್ನ ಹಾಳು ಮಾಡಿದ್ದು ಇವರೇ ಎಂದು ಟೀಕಿಸಿದ್ರು. ಕುಮಾರಸ್ವಾಮಿ ಸುಳ್ಳುಗಾರ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ರವೀಂದ್ರ ಶ್ರೀಕಂಠಯ್ಯ, ಬಡವರ ಕಷ್ಟ ಕೇಳಿ, ರೈತರ ಸಾಲಮನ್ನಾ ಮಾಡ್ತಾರೆ, ನಿಜ ಅವರು ಸುಳ್ಳುಗಾರ.
ಆದ್ರೆ, ಟವಲ್ ಹಾಕೊಂಡು ಪ್ರಮಾಣ ವಚನ ತಗೊಂಡವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ರು.
ಮಂಡ್ಯ ಕೆಡಿಪಿ ಸಭೆ ವಿಳಂಬ, ಅಭಿವೃದ್ಧಿ ಕೆಲಸಗಳು ಕುಂಠಿತವಾಗ್ತಿರುವ ಬಗ್ಗೆ ಮಾತ್ನಾಡಿದ ಅವರು,
ಉಸ್ತುವಾರಿ ಸಚಿವ ಹಾಗೂ KC ನಾರಾಯಣಗೌಡ ಇಬ್ಬರೂ ಸಚಿವರು ಕೆ.ಆರ್.ಪೇಟೆಗೆ ಸೀಮಿತವಾಗಿದ್ದಾರೆ. ಅವರಿಗೆ K.R.ಪೇಟೆ ಒಂದೇ ಮಂಡ್ಯ ಜಿಲ್ಲೆಯಾಗಿದೆ. K.R.ಪೇಟೆಯಿಂದ ಹೊರ ಬರಲು ಅವರಿಗೆ ಸಾಧ್ಯವಾಗ್ತಿಲ್ಲ. ಮಂಡ್ಯ ಜಿಲ್ಲೆ ಸಮಗ್ರ ಅಭಿವೃದ್ಧಿ ಆಗುವುದು ಅವರಲ್ಲಿ ಕಾಣ್ತಿಲ್ಲ‌ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

Share post:

Subscribe

spot_imgspot_img

Popular

More like this
Related

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...

ಹಿಟ್ಟಿನ ಹುಳಿ ರುಚಿಯನ್ನು ಕಡಿಮೆ ಮಾಡಲು ಕೆಲವು ಪರಿಣಾಮಕಾರಿ ವಿಧಾನ

ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಹಾಗೂ ಫ್ರಿಜ್ ತಾಪಮಾನ ಅಸ್ಥಿರತೆಯಿಂದಾಗಿ ಇಡ್ಲಿ–ದೋಸೆ...