ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ

Date:

ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಬಿಜೆಪಿ ಜೊತೆ ಸೇರಿ ಚಲುವರಾಯಸ್ವಾಮಿ ಮಂಡ್ಯ ವ್ಯವಸ್ಥೆಗಳನ್ನ ಹಾಳು ಮಾಡಿದ್ದಾರೆ. ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 9 ಸಾವಿರ ಕೋಟಿ ರೂ. ಕೊಟ್ರು. ಆ ಅನುದಾನ ವಾಪಸ್ ಹೋಗಲಿಕ್ಕೆ ಚಲುವರಾಯಸ್ವಾಮಿ ಕಾರಣ. ಬಿಜೆಪಿ ಜೊತೆ ಸೇರಿ ವ್ಯವಸ್ಥೆಗಳನ್ನ ಹಾಳು ಮಾಡಿದ್ದು ಇವರೇ ಎಂದು ಟೀಕಿಸಿದ್ರು. ಕುಮಾರಸ್ವಾಮಿ ಸುಳ್ಳುಗಾರ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ರವೀಂದ್ರ ಶ್ರೀಕಂಠಯ್ಯ, ಬಡವರ ಕಷ್ಟ ಕೇಳಿ, ರೈತರ ಸಾಲಮನ್ನಾ ಮಾಡ್ತಾರೆ, ನಿಜ ಅವರು ಸುಳ್ಳುಗಾರ.
ಆದ್ರೆ, ಟವಲ್ ಹಾಕೊಂಡು ಪ್ರಮಾಣ ವಚನ ತಗೊಂಡವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ರು.
ಮಂಡ್ಯ ಕೆಡಿಪಿ ಸಭೆ ವಿಳಂಬ, ಅಭಿವೃದ್ಧಿ ಕೆಲಸಗಳು ಕುಂಠಿತವಾಗ್ತಿರುವ ಬಗ್ಗೆ ಮಾತ್ನಾಡಿದ ಅವರು,
ಉಸ್ತುವಾರಿ ಸಚಿವ ಹಾಗೂ KC ನಾರಾಯಣಗೌಡ ಇಬ್ಬರೂ ಸಚಿವರು ಕೆ.ಆರ್.ಪೇಟೆಗೆ ಸೀಮಿತವಾಗಿದ್ದಾರೆ. ಅವರಿಗೆ K.R.ಪೇಟೆ ಒಂದೇ ಮಂಡ್ಯ ಜಿಲ್ಲೆಯಾಗಿದೆ. K.R.ಪೇಟೆಯಿಂದ ಹೊರ ಬರಲು ಅವರಿಗೆ ಸಾಧ್ಯವಾಗ್ತಿಲ್ಲ. ಮಂಡ್ಯ ಜಿಲ್ಲೆ ಸಮಗ್ರ ಅಭಿವೃದ್ಧಿ ಆಗುವುದು ಅವರಲ್ಲಿ ಕಾಣ್ತಿಲ್ಲ‌ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...