ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಳೆದ 2 ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ 11 ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಅನುಮಾನಸ್ಪದ ವ್ಯಕ್ತಿಗಳು, ವಾಹನಗಳನ್ನು ತಪಾಸಣೆ ನಡೆಸಿ ಅಪ್ಲಿಕೇಷನ್ ಮೂಲಕ ಪಾತಾಕಿಗಳನ್ನು ಪತ್ತೆ ಹಚ್ಚಲಾಗುತ್ತಿಸದೆ. ಈ ವೇಳೆ ಎಂಸಿಸಿಟಿಎನ್ಎಸ್ ಅಪ್ಲಿಕೇಷನ್ ನಲ್ಲಿ ಬೆರಳಚ್ಚುಗಳ ಪರಿಶೀಲನೆ ನಡೆಸಲಾಗುತ್ತದೆ. ಈಗಾಗಲೇ ಪೊಲೀಸರ ಬಳಿಯಿರುವ ಅಪರಾಧಿಗಳ ಪಿಂಗರ್ ಪ್ರಿಂಟ್ ಜೊತೆ ಮ್ಯಾಚ್ ಮಾಡಲಾಗುತ್ತದೆ. ಬೆರಳಚ್ಚು ಪರಿಶೀಲನೆ ವೇಳೆ ಆತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಕಂಡು ಬಂದರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ.
Latest article
ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ಶಕ್ತಿ ಬಂದಂತಾಗಿದೆ: ಬಿ. ವೈ. ರಾಘವೇಂದ್ರ
ಶಿವಮೊಗ್ಗ: ಈ ಬಾರಿ ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ನೂರಕ್ಕೆ ನೂರು ನಮಗೆ ಶಕ್ತಿ ಬಂದಂತಾಗಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೊದಲನೇ...
ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ!
ಕಾರವಾರ: ಜಿಲ್ಲೆಯ ಸಿದ್ದಾಪುರ ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಒಂಬತ್ತು ಜನ ಸಾವು ಕಂಡಿದ್ದಾರೆ. ಕೆಲವು...
ಈ ಬಾರಿ ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್’ಗೆ ಬರಲಿವೆ !
ಹುಬ್ಬಳ್ಳಿ: ಈ ಬಾರಿಯ ಚುನಾವಣೆ ಸತ್ಯ ಹಾಗೂ ಸುಳ್ಳು, ಪ್ರೀತಿ ಮತ್ತು ದ್ವೇಷದ ಮಧ್ಯೆ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪತ್ರಿಕಾಗೋಷ್ಠಿ...