No menu items!
28.4 C
Munich
Monday, June 22, 2026

ಸ್ವಾರ್ಥಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್: ಸಿ.ಟಿ.ರವಿ ಆರೋಪ

Must read

ಸ್ವಾರ್ಥಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್: ಸಿ.ಟಿ.ರವಿ ಆರೋಪ

ಬೆಂಗಳೂರು: ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿಗಳಾದ ಕಾಂಗ್ರೆಸ್ ನವರು ಬಿಜೆಪಿ ಮೇಲೆ ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿ.ಕೆ.ಹರಿಪ್ರಸಾದ್ ಅವರು, ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಆದರೆ ನಿಜವಾದ ಸಂವಿಧಾನ ವಿರೋಧಿಗಳು ಕಾಂಗ್ರೆಸ್ ಮುಖಂಡರು ಎಂದು ಹೇಳಿದರು.
ಸಂವಿಧಾನಕ್ಕೆ ಇದುವರೆಗೆ 106 ತಿದ್ದುಪಡಿಗಳನ್ನು ಮಾಡಲಾಗಿದೆ. ಇದರಲ್ಲಿ 76 ತಿದ್ದುಪಡಿಗಳನ್ನು ಕಾಂಗ್ರೆಸ್ ಮಾಡಿದೆ. ಈ ಎಲ್ಲ ತಿದ್ದುಪಡಿಗಳನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಮತ್ತು ಅಧಿಕಾರ ದುರುಪಯೋಗಕ್ಕಾಗಿ ಮಾಡಿದೆ ಎಂದು ದೂರಿದರು.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ, ಪ್ರಜಾಪ್ರಭುತ್ವದ ಕತ್ತು ಹಿಸುಕಿ, ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಿ, ವಿರೋಧಪಕ್ಷದ ನಾಯಕರನ್ನು ಜೈಲಿಗೆ ಅಟ್ಟಿದ್ದು ಕಾಂಗ್ರೆಸ್. ಇವರು ಈಗ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಯಾವುದೇ ಚರ್ಚೆ ಮಾಡದೆ, ಸಂವಿಧಾನದಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನೂ ತುರುಕಿದ್ದೂ ಕಾಂಗ್ರೆಸ್. ಈ ಬದಲಾವಣೆಯನ್ನು ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರೇ ವಿರೋಧಿಸಿದ್ದರು. ಅಂಬೇಡ್ಕರ್ ವಿರೋಧಿಗಳಾದ ನೀವು ಈಗ ಬಿಜೆಪಿ ಮೇಲೆ ಆಪಾದನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

- Advertisement -spot_img

More articles

- Advertisement -spot_img

Latest article