ನಾಳೆ ಡಿ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ: ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲಿರೋ ಆರೋಪಿಗಳು

Date:

ನಾಳೆ ಡಿ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ: ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲಿರೋ ಆರೋಪಿಗಳು

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಇದರ ನಡುವೆ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿ 11 ದಿನಗಳು ಆಗುತ್ತಿವೆ. ನಟ ದರ್ಶನ್ ಹಾಗೂ ಅವರ ಸಂಗಡಿಗರ ನ್ಯಾಯಾಂಗ ಬಂಧನದ ಅವಧಿ ಸೆ. 9ರಂದು ಮುಕ್ತಾಯವಾಗಲಿದೆ. ಆ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಆರೋಪಿಗಳೀಗ ಬೇರೆ ಬೇರೆ ಜೈಲುಗಳಲ್ಲಿದ್ದು ಅವರನ್ನು ಅವರು ಇರುವ ಜಾಗದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೊಳ ಪಡಿಸಲಾಗುತ್ತದೆ ಎಂದು ಹೇಳಲಾಗಿದೆ.
ಈಗಾಗಲೇ ದರ್ಶನ್ ಬೇಲ್ ವಿಚಾರವಾಗಿ ದರ್ಶನ್, ಪತ್ನಿ ಹಾಗೂ ಸಹೋದರ ದಿನಕರ್ ಜೊತೆ ಚರ್ಚೆ ಮಾಡಿದ್ದಾರೆ. ಇತ್ತೀಚೆಗೆ ಬಳ್ಳಾರಿ ಜೈಲಿಗೆ ಕುಟುಂಬ ಭೇಟಿ ನೀಡಿದ ಸಂದರ್ಭದಲ್ಲಿ ಚಾರ್ಜ್ಶೀಟ್ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಳ್ಳಾರಿ ಜೈಲಿನಲ್ಲಿಯೇ ದರ್ಶನ್ ಜಾಮೀನು ಅರ್ಜಿಗೆ ಸಹಿ ಮಾಡಿದ್ದಾರೆ. ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಲು ವಕೀಲರು ಸಕಲ ಸಿದ್ಧತೆ ಮಾಡಿಕೊಂಡಿದ್ದು. ಎಸಿಎಂಎಂ ಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...