ದರ್ಶನ್ ಆ್ಯಕ್ಸಿಡೆಂಟ್ ಪ್ರಕರಣಕ್ಕೆ ಹೊಸ ತಿರುವು! ಅಸಲಿಗೆ ಅಪಘಾತ ಆಗಿದ್ದು ಹೀಗಂತೆ!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ‌‌.

ಪ್ರಕರಣ ಗಳಿಗೆಗೆ ಒಂದು ತಿರುವು ಪಡೆಯುತ್ತಿದೆ.‌
ಒಡೆಯ ಸಿನಿಮಾದ ಚಿತ್ರೀಕರಣ ಮುಗಿಸಿ ದರ್ಶನ್ ಬೆಂಗಳೂರಿಗೆ ಬರುತ್ತಿರುವಾಗ ಹಿನಕಲ್ ಹತ್ತಿರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.‌ ಪರಿಣಾಮ ದರ್ಶನ್ ಕೈ ಮುರಿದಿದೆ.‌ಜೊತೆಗಿದ್ದ ನಟ ದೇವರಾಜ್ ,ಪ್ರಜ್ವಲ್ ದೇವರಾಜ್ ಅವರಿಗೂ ಗಾಯಗಳಾಗಿವೆ. ದರ್ಶನ್ ಗೆ ಶಸ್ತ್ರ ಚಿಕಿತ್ಸೆ ನಡೆದಿದೆ.‌ಅವರಿಗೆ ಎರಡು ವಾರಗಳ ವಿಶ್ರಾಂತಿಯನ್ನು ವೈದ್ಯರು ಸೂಚಿಸಿದ್ದಾರೆ.
ಈ ನಡುವೆ ಖಾಸಗಿ ವಾಹಿನಿಯೊಂದ ಜೊತೆ ಮಾತಾಡಿದ ದರ್ಶನ್, ಆಸ್ಪತ್ರೆಗೆ ಯಾರೂ ಬರದಂತೆ , ತಾನೇ ನಾಳೆ ನಿಮ್ಮ ಮುಂದೆ ಬರುತ್ತೇನೆ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.‌
ಜಿಟಿ ಜಿಟಿ ಮಳೆಯಲ್ಲಿ ವೇಗವಾಗಿ ಕಾರು ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆದರೆ , ಕಾರನ್ನು ಮುಚ್ಚಿಹಾಕಿದ್ದು ಅನುಮಾನಗಳಿಗೆ ದಾರಿ ಮಾಡಿದೆ. ಸುಮೊಟೊ ಕೇಸ್ ದಾಖಲಿಸಿಕೊಂಡ ಮೈಸೂರು ವಿವಿ ಪುರಂ ಪೊಲೀಸರು ಕಾರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...