No menu items!
29.6 C
Munich
Thursday, June 18, 2026

Darshan Jail Food : ದರ್ಶನ್ ಗೆ ಜೈಲೂಟದಿಂದ ಮುಕ್ತಿ ಸಿಗುತ್ತಾ..?

Must read

 

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆಯಲಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಮಾಡಲಾಗುತ್ತದೆ. ಮನೆಯೂಟ , ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು.
ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್‌ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ.

- Advertisement -spot_img

More articles

- Advertisement -spot_img

Latest article