ವನ್ಯ ಜೀವಿ ಉಳಿಸುವಂತೆ ಮನವಿ ಮಾಡಿದ ದಾಸ ದರ್ಶನ್

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಡಿಪುರ ದುರಂತ ನೋಡಿ ತುಂಬಾ ದುಃಖಿತರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಬಂಡಿಪುರ ಅಭಯಾರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 8 ಕೀ.ಮೀ. ವ್ಯಾಪ್ತಿಗೆ ಹಬ್ಬಿಕೊಂಡಿದೆ. ಪ್ರಾಜೆಕ್ಟ್ ಟೈಗರ್ ಅಭಿಯಾನಕ್ಕೂ ಈ ಅಭಯಾರಣ್ಯವು ಸಂಬಂಧವನ್ನು ಹೊಂದಿದೆ. ಅಪಾರ ಸಂಖ್ಯೆಯ ವನ್ಯ ಜೀವಿಗಳು ಹಾಗೂ ಸಂಪತ್ತು ನಾಶವಾಗಿವೆ. ಸಹಜವಾಗಿ ಅಲ್ಲಿದ್ದ ಕೆಲವು ಪ್ರಾಣಿ, ಪಕ್ಷಿಗಳು ಕೂಡ ಸುಟ್ಟು ಭಸ್ಮವಾಗಿ ಹೋಗಿವೆ.

ಬಿಸಿಲ ತಾಪಕ್ಕೆ ಹುಲ್ಲು ಒಣಗಿದ್ದರಿಂದ ಒಂದೆಡೆ ಹೊತ್ತಿಕೊಂಡ ಬೆಂಕಿ ವ್ಯಾಪಕವಾಗಿ ಆವರಿಸಿದೆ. ಕುಂದಕೆರೆಯ ಬರೆಕಟ್ಟೆ ಹಾಗೂ ಗುಡ್ಡಕೆರೆ ಬೆಟ್ಟಗಳಲ್ಲಿ ಕಾಣಿಸಿಕೊಂಡ ಬೆಂಕಿ ಹಿಮವದ್ ಗೋಪಾಲ ಸ್ವಾಮಿ ವಲಯದವರೆಗೂ ಹರಡಿದೆ. ಪ್ರಾಣಿ ಪ್ರಿಯರಾದ ದರ್ಶನ್ ಅವರು ಸರ್ಕಾರ ಹಾಗೂ ಸ್ವಯಂ ಸಂಘಗಳ ಜೊತೆಗೆ ಕೈ ಜೋಡಿಸುವ ಮನಸ್ಸು ಮಾಡಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಮ್ಮ ಟ್ವಿಟ್ಟರ್ ಪೇಜ್‌ ನಲ್ಲಿ ಪೋಸ್ಟ್ ಮಾಡಿ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...