ವನ್ಯ ಜೀವಿ ಉಳಿಸುವಂತೆ ಮನವಿ ಮಾಡಿದ ದಾಸ ದರ್ಶನ್

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಡಿಪುರ ದುರಂತ ನೋಡಿ ತುಂಬಾ ದುಃಖಿತರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಬಂಡಿಪುರ ಅಭಯಾರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 8 ಕೀ.ಮೀ. ವ್ಯಾಪ್ತಿಗೆ ಹಬ್ಬಿಕೊಂಡಿದೆ. ಪ್ರಾಜೆಕ್ಟ್ ಟೈಗರ್ ಅಭಿಯಾನಕ್ಕೂ ಈ ಅಭಯಾರಣ್ಯವು ಸಂಬಂಧವನ್ನು ಹೊಂದಿದೆ. ಅಪಾರ ಸಂಖ್ಯೆಯ ವನ್ಯ ಜೀವಿಗಳು ಹಾಗೂ ಸಂಪತ್ತು ನಾಶವಾಗಿವೆ. ಸಹಜವಾಗಿ ಅಲ್ಲಿದ್ದ ಕೆಲವು ಪ್ರಾಣಿ, ಪಕ್ಷಿಗಳು ಕೂಡ ಸುಟ್ಟು ಭಸ್ಮವಾಗಿ ಹೋಗಿವೆ.

ಬಿಸಿಲ ತಾಪಕ್ಕೆ ಹುಲ್ಲು ಒಣಗಿದ್ದರಿಂದ ಒಂದೆಡೆ ಹೊತ್ತಿಕೊಂಡ ಬೆಂಕಿ ವ್ಯಾಪಕವಾಗಿ ಆವರಿಸಿದೆ. ಕುಂದಕೆರೆಯ ಬರೆಕಟ್ಟೆ ಹಾಗೂ ಗುಡ್ಡಕೆರೆ ಬೆಟ್ಟಗಳಲ್ಲಿ ಕಾಣಿಸಿಕೊಂಡ ಬೆಂಕಿ ಹಿಮವದ್ ಗೋಪಾಲ ಸ್ವಾಮಿ ವಲಯದವರೆಗೂ ಹರಡಿದೆ. ಪ್ರಾಣಿ ಪ್ರಿಯರಾದ ದರ್ಶನ್ ಅವರು ಸರ್ಕಾರ ಹಾಗೂ ಸ್ವಯಂ ಸಂಘಗಳ ಜೊತೆಗೆ ಕೈ ಜೋಡಿಸುವ ಮನಸ್ಸು ಮಾಡಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಮ್ಮ ಟ್ವಿಟ್ಟರ್ ಪೇಜ್‌ ನಲ್ಲಿ ಪೋಸ್ಟ್ ಮಾಡಿ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...