ಇವತ್ತು ಧೋನಿ ಅಭಿಮಾನಿಗಳಿಗೆ ನಿರಾಸೆ ಆಗ್ಬಹುದು…! ಏಕೆ ಗೊತ್ತಾ?

Date:

ರಾಂಚಿ : ಇಂದು ರಾತ್ರಿ 7 ಗಂಟೆಗೆ ಅತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವೆ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಡೆಯಬೇಕಿದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಆತಂಕವಿದೆ.

ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಟಿ-20 ಪಂದ್ಯವನ್ನು ಗೆಲ್ಲುವ ಮುಖೇನ ಗೆಲುವಿನ ನಾಗಲೋಟವನ್ನು ಮುಂದುವರೆಸುವ ಆತ್ಮವಿಶ್ವಾಸದಲ್ಲಿ ವಿರಾಟ್ ಕೋಹ್ಲಿ ನೇತೃತ್ವದ ಟೀಂ ಇಂಡಿಯಾವಿದೆ. ಇನ್ನೊಂದು ಸ್ಟೀವ್ ಸ್ಮಿತ್ ಮುಂದಾಳತ್ವದ ಕಾಂಗರೂ ಪಡೆ ಏಕದಿನ ಸರಣಿಯಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.


ಹೀಗೆ ಭಾರತ ಮತ್ತು ಆಸೀಸ್ ಆಟಗಾರರು ಗೆಲುವಿಗಾಗಿ ಎದುರುನೋಡುತ್ತಿದ್ದರೆ, ರಾಂಚಿ ಕ್ರಿಕೆಟ್ ಪ್ರೇಮಿಗಳು ಮಾತ್ರ ಮಾಜಿ ನಾಯಕ, ತಮ್ಮ ಮನೆಮಗ ಮಹೇಂದ್ರ ಸಿಂಗ್ ಧೋನಿ ಅವರ ಆಟವನ್ನು ಕಣ್ತುಂಬಿಕೊಳ್ಳಲು ಕಾಯ್ತಾ ಇದ್ದಾರೆ.
ಆದರೆ, ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಇದರಿಂದ ಧೋನಿ ಆಟಕ್ಕೆ ಕಾದಿರುವ ಅಭಿಮಾನಿಗಳಿಗೆ ನಿರಾಸೆ ಆಗಬಹುದು ಎಂದು ಹೇಳಲಾಗ್ತಾ ಇದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...