ಹಳೆಯ ನೋಟು ನಿಷೇಧದಿಂದಾಗಿ ದೇಶದಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗುತ್ತಿರುವ ಪರಿಣಾಮವಾಗಿ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ತಗ್ಗುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ದೇಶದಲ್ಲಿ ಅಕ್ರಮ ಹಣದ ಮೇಲೆ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದು ಎಲ್ಲಾ ವ್ಯವಹಾರಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದರಿಂದ ಭವಿಷ್ಯದಲ್ಲಿ ನೇರ ಮತ್ತು ಪರೋಕ್ಷ ತೆರಿಗೆ ದರಗಳು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸುಳಿವು ನೀಡಿದ್ದಾರೆ. ಇದೇ ವೇಳೆಯಲ್ಲಿ ಭಾರಿ ಮೊತ್ತದ ಹಣವನ್ನು ಹೊಂದಿದವರು ಅಗಾಧ ಪ್ರಮಾಣದ ತೆರಿಗೆ ತೆರುವುದು ನಿಶ್ಚಿತ ಎಂದು ಜೇಟ್ಲಿ ಎಚ್ಚರಿಸಿದ್ದಾರೆ. ತೆರಿಗೆ ವ್ಯಾಪ್ತಿಗೆ ಒಳಪಡದೆ ಚಲಾವಣೆಯಾಗುತ್ತಿದ್ದ ಭಾರಿ ಹಣ ಈಗ ಬ್ಯಾಂಕಿಂಗ್ ವ್ಯವಸ್ಥೆಗೆ ಜಮೆಯಾಗಲಿದೆ. ಈ ಹಣಕ್ಕೆ ಇದುವರೆಗೂ ಕಟ್ಟದಿರುವ ತೆರಿಗೆಯನ್ನು ವಸೂಲಿ ಮಾಡಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಭವಿಷ್ಯದ ವ್ಯವಹಾರಗಳು ಡಿಜಿಟಲೀಕರಣಗೊಳ್ಳುವುದರಿಂದ ತೆರಿಗೆ ವಂಚನೆಗೆ ಅವಕಾಶ ಕಡಿಮೆಯಾಗಲಿದೆ. ಸರಕಾರ ತೆರಿಗೆ ಸಂಗ್ರಹ ಪ್ರಮಾಣವೂ ಹೆಚ್ಚುವುದರಿಂದ ನೇರ ಮತ್ತು ಪರೋಕ್ಷ ತೆರಿಗೆ ದರಗಳಲ್ಲಿ ಕಡಿತ ಮಾಡಲು ಅವಕಾಶ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಹೊಸ ನೋಟ್ಗಳಲ್ಲಿರೋದು ಚಿಪ್ ಅಲ್ಲ..! ಹಾಗಾದ್ರೆ ಮತ್ತೇನು..!?
ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?
ಪ್ರಥಮ್ಗೆ ಸಂಜನಾ ಹುಚ್ಚು ನೆತ್ತಿಗೇರಿದೆ | ಭುವನ್ಗೆ ಒಂಥರಾ ಟೆನ್ಷನ್ ಸ್ಟಾರ್ಟ್ ಆಗಿದೆ
ಅನಿಲ್-ಉದಯ್ ಕುಟುಂಬಕ್ಕೆ ನೆರವು ನೀಡಲು ಮುಂದಾದ ಯಶ್
ಯಶ್ ರಾಧಿಕಾ ಲವ್ ಶುರುವಾಗಿದ್ದು ಹೇಗೆ ಅಂತ ಸತೀಶ್ ಹೇಳ್ತಾರೆ ಕೇಳಿ..!
ಇವಳು ಜಯಲಲಿತಾ ಮಗಳು ಎಂದು ಸುದ್ದಿ ವೈರಲ್.! ಆದರೆ ಇವರು ಯಾರು ಗೊತ್ತಾ.?