No menu items!
19.3 C
Munich
Saturday, April 25, 2026

ಮೌನ ಹೋರಾಟಕ್ಕೆ ಡಿಕೆಶಿ ಸಿದ್ದ !!

Must read

 

ಜುಲೈ 26ರಂದು ಎಲ್ಲಾ ಮುಖಂಡರ ನೇತೃತ್ವದಲ್ಲಿ ಮೌನ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ಕೋರ್ಟ್ ಗೆ ಹೋಗದೇ ವಿಚಾರಣೆಗೆ ಹಾಜರಾಗಿದ್ದಾರೆ. ಆದರೂ ಅವರಿಗೆ ಕಿರುಕುಳ‌ ನೀಡುತ್ತಿದ್ದಾರೆ. ಹೀಗಾಗಿ, ಮೌರ್ಯ ಸರ್ಕಲ್​ನಲ್ಲಿ ಎಲ್ಲಾ ಮುಖಂಡರ ನೇತೃತ್ವದಲ್ಲಿ 26ನೇ ತಾರೀಕು ಮೌನ ಹೋರಾಟ ಮಾಡುತ್ತೇವೆ ಎಂದರು. ಇನ್ನೂ ಚೆಲುವರಾಯಸ್ವಾಮಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಭಾರತ್‌ ಜೋಡೋ ಯಾತ್ರೆ ಶ್ರೀರಂಗಪಟ್ಟಣದಿಂದ ಮೈಸೂರು, ನಾಗಮಂಗಲ ‌ಮೂಲಕ ಹೋಗುತ್ತದೆ. ಹೀಗಾಗಿ, ಅವರನ್ನು ಭೇಟಿಯಾಗಿ ಸಿದ್ದತೆ ಬಗ್ಗೆ ಸಲಹೆ ಕೊಟ್ಟಿದ್ದೇನೆ. ಸಂಘಟನೆ ವಿಚಾರವನ್ನಷ್ಟೇ ಚರ್ಚೆ ಮಾಡಿದ್ದೇನೆ ಹೊರತು ಬೇರೆ ವಿಚಾರ ಪ್ರಸ್ತಾಪಿಸಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article