No menu items!
17.6 C
Munich
Thursday, April 23, 2026

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್

Must read

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು: ಅಧಿಕಾರ ಹಂಚಿಕೆ ಕುರಿತಾಗಿ ಪಕ್ಷದೊಳಗಿನ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು ಎಂದು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪರವಾಗಲಿ ಅಥವಾ ವಿರುದ್ಧವಾಗಲಿ ಶಾಸಕರು, ಸಚಿವರು ನೀಡುವ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವಂತೆಯೇ ಹೊರತು, ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ ಎಂದರು. ಈ ರೀತಿಯ ಹೇಳಿಕೆಗಳಿಂದ ಯಾರಿಗೂ ಪ್ರಯೋಜನ ಇಲ್ಲ ಎಂದು ಸ್ಪಷ್ಟಪಡಿಸಿದರು.

ನೀವು ಶುಭಸುದ್ದಿ ತರುವಿರಿ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಪ್ರತಿದಿನವೂ ನನಗೆ ಶುಭ ದಿನವೇ. ಶುಭ ಜೀವನ, ಶುಭ ಆರಂಭ, ಯಶಸ್ಸಿನ ದಿನ ಎಂದರೆ ಪ್ರತಿದಿನವೂ ಕಷ್ಟದ ದಿನವೇ. ಯಾವುದೂ ಸುಲಭವಾಗಿ ಸಿಗುವುದಿಲ್ಲ ಎಂದು ಹೇಳಿದರು.

ಜನರ ಕಷ್ಟಗಳನ್ನು ಬಗೆಹರಿಸಲು ಹೋರಾಟ, ಅಡಚಣೆಗಳು, ತೊಡಕುಗಳು ಸಹಜ. ಟೀಕೆಗಳು ಬರುತ್ತಲೇ ಇರುತ್ತವೆ. ಅವುಗಳನ್ನು ಎದುರಿಸಿಕೊಂಡೇ ನಮ್ಮ ಕೆಲಸವನ್ನು ಮುಂದುವರೆಸಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

- Advertisement -spot_img

More articles

- Advertisement -spot_img

Latest article