ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರಕ್ಕೆ ಹೊಸ ಸಿಎಂ

admin
0 Min Read

ಮುಂಬೈ: ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆಯಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಸಿಎಂ ಸ್ಥಾನಕ್ಕೇರಲಿದ್ದಾರೆ ಎನ್ನಲಾಗಿತ್ತು. ಆದರೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಭೇಟಿ ಬಳಿಕ, ಸಿಎಂ ಪಟ್ಟಕ್ಕೆ ಶಿವಸೇನೆಯ ರೆಬೆಲ್ ಸಚಿವ ಏಕನಾಥ್ ಶಿಂಧೆ ಹೆಸರು ಪ್ರಸ್ತಾಪಿಸಲಾಗಿದೆ.

 

ರಾಜ್ಯಪಾಲರ ಭೇಟಿ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಏಕನಾಥ್ ಶಿಂಧೆ ಹೆಸರು ಪ್ರಸ್ತಾಪವಾಗಿದೆ. ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರದ ರಾಜಭವನದಲ್ಲಿ ಶಿಂಧೆ ಸಿಎಂ ಸ್ಥಾನಕ್ಕೆ ಪದಗ್ರಹಣ ಮಾಡಲಿದ್ದಾರೆ.

 

 

ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವಿಸ್, ನಾನು ಸರ್ಕಾರ ರಚನೆಯಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿದ್ದಾರೆ.

Share This Article
Leave a Comment