ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Date:

ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದ್ದು, ಪ್ರಬಲ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರಕ್ರಿಯೆ ಆರಂಭವಾಗಿದೆ. ಚುನಾವಣೆ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ನವೆಂಬರ್ 5 ರಿಂದ 15 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಟಿಕೆಟ್ ಬಯಸುವವರು ಅರ್ಜಿಗೆ 5 ಸಾವಿರ ರೂಪಾಯಿ ಶುಲ್ಕ ‌ಪಾವತಿಸಬೇಕಿದೆ.‌
ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂಪಾಯಿ ಡಿಡಿ, ಕಾಂಗ್ರೆಸ್ ಸದಸ್ಯತ್ವದ ವಿವರ ಲಗತ್ತಿಸಬೇಕಿದೆ. ಇನ್ನ ಪರಿಶಿಷ್ಟ ವರ್ಗದವರಿಗೆ ಶೇ.50ರಷ್ಟು ವಿನಾಯಿತಿ ಘೋಷಣೆ ಮಾಡಲಾಗಿದ್ದು, ಇಲ್ಲಿ ಸಂಗ್ರಹಿಸುವ ಹಣ ಕಾಂಗ್ರೆಸ್ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ. ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಅರ್ಜಿ ಹಾಕುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ಸಂದೇಶವನ್ನು ಡಿಕೆಶಿ ರವಾನಿಸಿದ್ದು, ಕಾಂಗ್ರೆಸ್ ತೊರೆದಿದ್ದವರು ಮತ್ತೆ ಪಕ್ಷಕ್ಕೆ ಬರುವುದಾದ್ರೆ ಅರ್ಜಿ ಸಲ್ಲಿಸಲು ಕರೆ ನೀಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಒಂದು ಸಮಿತಿ ರಚಿಸಿದ್ದು, ಪಕ್ಷ ಸೇರ್ಪಡೆ ಬಗ್ಗೆ ಸಮಿತಿ ತೆಗೆದುಕೊಳ್ಳುವ ತೀರ್ಮಾನವೇ ಫೈನಲ್ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...