ವಿದ್ಯುತ್ ತಂತಿಗೆ ಇನ್ನೊಂದು ಬಲಿ..!

0
44

ಮಂಡ್ಯ : ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ , ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಅಘಲೆಕೊಪ್ಪಲು ಗ್ರಾಮದಲ್ಲಿ ನಡೆದಿದೆ . ಗಿರೀಶ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು , ತಮ್ಮ ಜಮೀನಿನಲ್ಲಿ ಹುಲ್ಲು ಕುಹ್ಲಿಗೆ ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದು ದುರ್ಘಟನೆ ಸಂಭವಿಸಿದೆ .

ಇನ್ನೂ ಸ್ಥಳಕ್ಕೆ ಬಿಂಡಿಗನವಿಲೆ ಪೊಲೀಸರು ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿದ್ದಾರೆ . ಗ್ರಾಮಸ್ಥರು ಜಮೀನಿನಿಂದ ಮೃತ ದೇಹವನ್ನ ಹೊರತಂದಿದ್ದಾರೆ . ಸ್ಥಳದಲ್ಲಿ ಮೃತ ಯುವರೈತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು . ಈ ಸಂದರ್ಭದಲ್ಲಿ ಸೆಸ್ಕ್ ವತಿಯಿಂದ ಪರಿಹಾರ ನೀಡುವುದಾಗಿ ಸೆಸ್ಕ್ ಅಧಿಕಾರಿಗಳು ಭರವಸೆ ನೀಡಿದ್ದಾರೆ . ಸಧ್ಯಕ್ಕೆ ನಾಗಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .

LEAVE A REPLY

Please enter your comment!
Please enter your name here