ಆನೆ ಹಾವಳಿಯಿಂದ ಉಂಟಾದ ಬೆಳೆ ಹಾನಿಯ ಪರಿಹಾರ ದುಪ್ಪಟ್ಟು

Date:

ಆನೆ ಹಾವಳಿಯಿಂದ ಉಂಟಾದ ಬೆಳೆ ಹಾನಿಯ ಪರಿಹಾರವನ್ನು ದುಪ್ಪಟ್ಟು ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆನೆ ದಾಳಿಯಿಂದ ಮೃತರ ಕುಟುಂಬಕ್ಕೆ ನೀಡುತ್ತಿದ್ದ 7.5 ಲಕ್ಷ ರೂ. ಪರಿಹಾರವನ್ನು 15 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು. ಇದರ ಜೊತೆಗೆ ಮಾನವ ಹಾಗೂ ಆನೆಗಳ ಸಂಘರ್ಷ ತಡೆಗೆ ಈ ವರ್ಷ 100 ಕೋಟಿ ರೂ. ವೆಚ್ಚದಲ್ಲಿ 74 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಆನೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿಗೆ ಪ್ರಸ್ತುತ ಇರುವ ಪರಿಹಾರ ಸಾಲದು ಎಂಬುದು ಗಮನದಲ್ಲಿದೆ. ಇದನ್ನು ದುಪ್ಪಟ್ಟು ಮಾಡಲಾಗುವುದು. ಜೊತೆಗೆ, ಆನೆ ದಾಳಿಯಿಂದ ಮೃತರ ಕುಟುಂಬಗಳಿಗೆ 7.5 ರೂ. ಮಾತ್ರ ಪರಿಹಾರ ನೀಡುತ್ತಿದ್ದು, ಇದನ್ನು ದ್ವಿಗುಣಗೊಳಿಸಲಾಗುವುದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...