No menu items!
3.1 C
Munich
Thursday, April 30, 2026

ಕಡೆಗೂ ಬದುಕಲಿಲ್ಲ ಕಾಡಾನೆ ಸಿದ್ದ..!

Must read

ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಡಾನೆ ಸಿದ್ದ ಡಿ.8 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಆಗಸ್ಟ್ ತಿಂಗಳಿನಲ್ಲಿ ಬನ್ನೇರುಘಟ್ಟದಿಂದ ಆಹಾರ ಹುಡುಕುತ್ತಾ ಬಂದಿದ್ದ ಈ ಕಾಡಾನೆ ಸಿದ್ದ ಕಾಲು ಮುರಿದುಕೊಂಡಿತ್ತು. ಇದೇ ವೇಳೆ ರಾಮನಗರದ ಮಂಚಬೆಲೆನಹಳ್ಳಿ ಬಳಿ 2-3 ತಿಂಗಳ ಕಾಲ ಆಹಾರ ಮತ್ತು ಚಿಕಿತ್ಸೆ ನೀಡಿ ಹಾರೈಕೆ ಮಾಡಲಾಗುತ್ತಿದ್ದರಾದರೂ ಯಾವುದೇ ಚೇತರಿಕೆ ಕಂಡು ಬಂದಿರಲಿಲ್ಲ. ಆದರೆ ಕೆಲವು ದಿನಗಳ ಹಿಂದೆಯಷ್ಟೆ ಕಾಡಾನೆ ಸಿದ್ದ ಚೇತರಿಕೆ ಕಾಣುತ್ತಿದೆ ಎನ್ನುವಾಗಲೇ ನೆನ್ನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಕಾಡಾನೆ ಸಿದ್ದನ ಚಿಕಿತ್ಸೆಗಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಅರಣ್ಯ ಇಲಾಖೆಯು ವೈಲ್ಡ್ ಲೈಫ್ ಎಸ್‍ಒಎಸ್ ಎಂಬ ಸಂಸ್ಥೆ ಸಹಕಾರದ ಜೊತೆಗೆ ಸಿದ್ದನ ಚಿಕಿತ್ಸೆ ಬಗ್ಗೆ ತೀವ್ರ ನಿಗಾ ವಹಿಸಲಾಗಿತ್ತು. ಆದರೆ ಯಾವುದೇ ಫಲಕಾರಿಯಾಗಲಿಲ್ಲ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article