No menu items!
18.3 C
Munich
Wednesday, August 12, 2026

ಫಿಫಾ ವಿಶ್ವಕಪ್ ಫೈನಲ್: ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಿ – ಸಿಎಂ ಡಿ.ಕೆ. ಶಿವಕುಮಾರ್ ಮನವಿ

Must read

ಫಿಫಾ ವಿಶ್ವಕಪ್ ಫೈನಲ್: ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಿ – ಸಿಎಂ ಡಿ.ಕೆ. ಶಿವಕುಮಾರ್ ಮನವಿ
ಬೆಂಗಳೂರು, ಜುಲೈ 19: ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯವನ್ನು ವೀಕ್ಷಿಸಲು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ಹಾಗೂ ತಾಳ್ಮೆಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಭಾನುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲೆಡೆ ಪೊಲೀಸರು ಕ್ಯಾಮೆರಾಗಳನ್ನು ಅಳವಡಿಸಿದ್ದು, ಯಾರೇ ಗೆದ್ದರೂ ಅಭಿಮಾನಿಗಳು ಸಂಯಮ ಕಾಪಾಡಿಕೊಂಡು ಆಟವನ್ನು ಆನಂದಿಸಬೇಕು ಎಂದು ಹೇಳಿದರು.
ಬರ ಪರಿಸ್ಥಿತಿ: ಸಚಿವರು, ಅಧಿಕಾರಿಗಳಿಗೆ ರಜೆ ಇಲ್ಲ
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಎದುರಿಸಲು ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು 24 ಗಂಟೆಯೂ ಕಾರ್ಯನಿರ್ವಹಿಸಬೇಕು. “ನಮಗೆ, ನಿಮಗೆ ಭಾನುವಾರ ಅಥವಾ ರಜೆ ಎಂಬುದು ಇಲ್ಲ” ಎಂದು ಸಿಎಂ ಹೇಳಿದರು.
ಬರ ನಿರ್ವಹಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವೀಡಿಯೊ ಸಂವಾದ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ ಪ್ರತಿ ತಾಲ್ಲೂಕಿಗೆ ₹1 ಕೋಟಿ
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ರಾಜ್ಯದ ಪ್ರತಿ ತಾಲ್ಲೂಕಿಗೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

- Advertisement -spot_img

More articles

- Advertisement -spot_img

Latest article