ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು, ವರ ದುರಂತ ಸಾವು

Date:

 

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಮದುವೆಯ ಮೊದಲ ರಾತ್ರಿಯೇ ನವದಂಪತಿ ಹೊಡೆದಾಡಿಕೊಂಡು ವಧುವಿನ ಜೊತೆಗೆ ವರನೂ ಮೃತಪಟ್ಟಿರುವ ಘಟನೆ ನಡೆದಿದೆ. ವಧು ಲಿಖಿತ ಶ್ರೀ ಹಾಗೂ ನವೀನ್ ಮೃತ ದುರ್ಧೈವಿಗಳಾಗಿದ್ದು, ನಿನ್ನೆ ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ.
ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ. ಆಸ್ಪತ್ರೆ ಸೇರಿದ್ದ ವರ ನವೀನ್ (28) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ನಿನ್ನೆ ದಾಖಲಾಗಿದ್ದ ನವೀನ್ ಕುಮಾರ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು.
ನಿನ್ನೆ ಬೆಳಗ್ಗೆ ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಮಚ್ಚು ಹಿಡಿದು ಕೊಚ್ಚಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ವಧು ನಿನ್ನೆಯೇ ಕೊನೆಯುಸಿರೆಳೆದಿದ್ದಳು. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...