No menu items!
23.4 C
Munich
Saturday, May 2, 2026

ಗಣೇಶ ಹಬ್ಬಕ್ಕೆ ಕೌಂಟ್ ಡೌನ್: ವಿದ್ಯುತ್ ಅವಘಡಗಳ ಬಗ್ಗೆ ಬೆಸ್ಕಾಂ ನಿಂದ ಮಾರ್ಗಸೂಚಿ ಬಿಡುಗಡೆ!

Must read

 

ಬೆಂಗಳೂರು:- ಗೌರಿ ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ವಿದ್ಯುತ್ ಅವಘಡಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಹೊರಡಿಸಿದೆ.

X ಮಾಡಿರುವ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ.

ಮಾರ್ಗಸೂಚಿಗಳು ಹೀಗಿವೆ
ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು.
ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು. ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯಬಾರದು.
ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರ್ದು

ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್‌ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬೇಡಿ. ಮೆರವಣಿಗೆ ಮಾರ್ಗವನ್ನ ಮುಂಚಿತ ಎಸಿ ಗಮನಕ್ಕೆ ತನ್ನಿ.
ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ವಿದ್ಯುತ್ ಪರಿಕರಗಳಿರುವ ಸ್ಥಳಗಳಲ್ಲಿ ‘ಡೇಂಜರ್ ಜೋನ್’ ಎಂದು ಸೂಚಿಸಬೇಕು ಅಂತಾ ಬೆಸ್ಕಾಂ ಹೇಳಿದೆ.

- Advertisement -spot_img

More articles

- Advertisement -spot_img

Latest article