ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ನಿಯಮ ಜಾರಿ

Date:

ಗಣೇಶ ಚತುರ್ಥಿಗೆ ಬಿಬಿಎಂಪಿ‌ಯಿಂದ ಹಲವು ನಿಯಮಗಳು ಜಾರಿಯಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಚತುರ್ಥಿಗೆ ಬಿಬಿಎಂಪಿ‌ ಹಲವು ನಿಯಮಗಳನ್ನು ಜಾರಿ ಮಾಡಿದ್ದು, ಈ ಬಾರಿಯೂ ಬೆಂಗಳೂರಿನಲ್ಲಿ ವಾರ್ಡ್​​ಗೊಂದೇ ಗಣೇಶ ಕೂಡಿಸಬೇಕೆಂದು ಬಿಬಿಎಂಪಿ ಹೇಳಿದೆ. ಕಳೆದ ವರ್ಷದ ನಿಯಮಗಳೆ ಈ ಬಾರಿಯೂ ಜಾರಿಯಾಗಲಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.  ಪಿಒಪಿ ಗಣೇಶ ಮೂರ್ತಿ ತಯಾರಿಸಬಾರದೆಂಬ ನಿಯಮವಿದೆ. ಹೀಗಾಗಿ ಯಾರೂ ಪಿಒಪಿ ಗಣೇಶ ಮೂರ್ತಿ ತಯಾರಿಸಿ, ಮಾರಾಟ ಮಾಡಬಾರದು. ಒಂದು ವೇಳೆ ಪಿಒಪಿ ಮೂರ್ತಿಗಳನ್ನ ಮಾರಿದರೇ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಸೇರಿ ರೇಡ್ ಮಾಡಿ ಕ್ರಮ‌ ಕೈಗೊಳ್ಳಲಾಗುತ್ತದೆ ಎಂದು ಖಡಕ್​ ಸೂಚನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...