ಗಣೇಶ ಹಬ್ಬದ ನೆಪದಲ್ಲಿ ಶಿಕ್ಷಣ ಇಲಾಖೆಗೆ ವಕ್ಫ್ ಬೋರ್ಡ್ ಹೊಸ ಬೇಡಿಕೆ

Date:

ಗಣೇಶ ಹಬ್ಬದ ಹೆಸರಿನಲ್ಲಿ ಶಿಕ್ಷಣ ಇಲಾಖೆ ಮುಂದೆ ವಕ್ಫ್ ಬೋರ್ಡ್ ಹೊಸ ಬೇಡಿಕೆ ಇಡುವ ಮೂಲಕ ಮತ್ತೊಂದು ಧರ್ಮ ದಂಗಲ್ ಉಂಟಾಗಿದೆ. ಶಾಲೆಗಳಲ್ಲಿ ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು, ನಮ್ಮ ಧಾರ್ಮಿಕ ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು, ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ಸಿಗಬೇಕು, ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದ ಆಚರಣೆಗೂ ಅವಕಾಶ ಕೊಡಬೇಕು, ಪ್ರತಿ ಮಕ್ಕಳಿಗೂ ಧರ್ಮದ ಕುರಿತು ಅರಿವು ಮೂಡಿಸಬೇಕು, ನೈತಿಕ ಶಿಕ್ಷಣ ಅಡಿ ಧಾರ್ಮಿಕ ಪಾಠ ಮಕ್ಕಳಿಗೆ ನೀಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ಅವರು ಬೇಡಿಕೆ ಇಟ್ಟಿದ್ದಾರೆ. ಶಿಕ್ಷಣ ಸಚಿವರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ಹಿಜಾಬ್ ವಿವಾದ ಆದಾಗಲೂ ನಾವು ಒಂದು ವಿಷಯ ಸ್ಪಷ್ಟ ಪಡಿಸಿದ್ದೇವೆ. ಧಾರ್ಮಿಕ‌ ವಿಚಾರಗಳನ್ನು ತಿಳಿಸುವ ಮೂಲಕ ಅಪನಂಬಿಕೆ ಹೋಗಲಾಡಿಸಬೇಕು. ಎಲ್ಲಾ ಧಾರ್ಮಿಕ ಆಚರಣೆಗಳಿಗೂ ಅವಕಾಶ ಮಾಡಿಕೊಡಬೇಕು. ಗಣೇಶೋತ್ಸವಕ್ಕೆ ಅವಕಾಶ ಕೊಟ್ಟ ರೀತಿಯಲ್ಲೇ ಇಸ್ಲಾಮಿಕ್ ಧಾರ್ಮಿಕ ಅವಕಾಶಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...