ಬೆಂಗಳೂರು ಈಗ ಕಸದ ನಗರವಾಯ್ತಾ ?

Date:

ಶ್ರೀಮಂತ ಬೆಂಗಳೂರು ಈಗ ಕಸದ ನಗರವಾಗಿದೆ ಎಂದು ಇದು ಎಂತಹ ಅವಮಾನ ಎಂದು ಉದ್ಯಮಿ ಮೋಹನ್ ದಾಸ್ ಪೈ ಬೇಸರ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘ಸ್ವಚ್ಛ ಸರ್ವೇಕ್ಷಣಾ’ ಶ್ರೇಯಾಂಕದಲ್ಲಿ ಬೆಂಗಳೂರಿಗೆ 45 ನಗರಗಳ ಪಟ್ಟಿಯಲ್ಲಿ 43ನೇ ಸ್ಥಾನ ಸಿಕ್ಕಿರುವುದಕ್ಕೆ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತದ ಏಕೈಕ ಜಾಗತಿಕ ನಗರ, ಶ್ರೀಮಂತ ನಗರ ಬೆಂಗಳೂರು ಕಸದ ನಗರವಾಯಿತು. ನಾಚಿಕೆಯಾಗುತ್ತಿದೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ. ಕಟ್ಟುನಿಟ್ಟಾದ, ತುರ್ತು ಸುಧಾರಣಾ ಕ್ರಮಗಳಿಗೆ ಆಗ್ರಹಿಸಿರುವ ಪೈ, ತಮ್ಮ ಟ್ವೀಟ್‌ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಇನ್ನೂ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ ವರದಿ ಪ್ರಕಟಗೊಂಡಿದ್ದು, ಬಿಬಿಎಂಪಿ ಕಳೆದ ಬಾರಿಗಿಂತ ಈ ಬಾರಿ 15 ಸ್ಥಾನಗಳಷ್ಟು ಕುಸಿದಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...