No menu items!
10 C
Munich
Monday, April 20, 2026

ಬೆಂಗಳೂರು ಈಗ ಕಸದ ನಗರವಾಯ್ತಾ ?

Must read

ಶ್ರೀಮಂತ ಬೆಂಗಳೂರು ಈಗ ಕಸದ ನಗರವಾಗಿದೆ ಎಂದು ಇದು ಎಂತಹ ಅವಮಾನ ಎಂದು ಉದ್ಯಮಿ ಮೋಹನ್ ದಾಸ್ ಪೈ ಬೇಸರ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘ಸ್ವಚ್ಛ ಸರ್ವೇಕ್ಷಣಾ’ ಶ್ರೇಯಾಂಕದಲ್ಲಿ ಬೆಂಗಳೂರಿಗೆ 45 ನಗರಗಳ ಪಟ್ಟಿಯಲ್ಲಿ 43ನೇ ಸ್ಥಾನ ಸಿಕ್ಕಿರುವುದಕ್ಕೆ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತದ ಏಕೈಕ ಜಾಗತಿಕ ನಗರ, ಶ್ರೀಮಂತ ನಗರ ಬೆಂಗಳೂರು ಕಸದ ನಗರವಾಯಿತು. ನಾಚಿಕೆಯಾಗುತ್ತಿದೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ. ಕಟ್ಟುನಿಟ್ಟಾದ, ತುರ್ತು ಸುಧಾರಣಾ ಕ್ರಮಗಳಿಗೆ ಆಗ್ರಹಿಸಿರುವ ಪೈ, ತಮ್ಮ ಟ್ವೀಟ್‌ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಇನ್ನೂ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ ವರದಿ ಪ್ರಕಟಗೊಂಡಿದ್ದು, ಬಿಬಿಎಂಪಿ ಕಳೆದ ಬಾರಿಗಿಂತ ಈ ಬಾರಿ 15 ಸ್ಥಾನಗಳಷ್ಟು ಕುಸಿದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article