ಏರ್ ಶೋ ಬೆಂಕಿ ಅನಾಹುತದಲ್ಲಿ ಕಾರು ಕಳೆದುಕೊಂಡವರಿಗಾಗಿ ಸಹಾಯ ಕೇಂದ್ರ ಆರಂಭ..

Date:

ಏರ್ ಶೋ ಬೆಂಕಿ ಅನಾಹುತದಲ್ಲಿ ಕಾರು ಕಳೆದುಕೊಂಡವರಿಗಾಗಿ ಸಹಾಯ ಕೇಂದ್ರ ಆರಂಭ..

ಇಂದು ಏರ್ ಶೋನಲ್ಲಿ ಲೋಹದ ಹಕ್ಕಿಗಳ ಸಾಹಸವನ್ನ ಕಣ್ತುಂಬಿಕೊಳ್ಳಲು ನೆರೆದಿದ್ದ ಅಭಿಮಾನಿಗಳಿಗೆ ಬೆಂಕಿ ಬಿಸಿ ಮುಟ್ಟಿತ್ತು.. ಅಲ್ಲಿ ಏರ್ ಶೋ ವೀಕ್ಷಿಸಲು ಕುಟುಂಬ, ಸ್ನೇಹಿತರ ಜೊತೆಗೆ ಒಳಗೆ ಸೇರಿದ್ರೆ, ಇತ್ತ ಅವರ ಕಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿತ್ತು.. ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಚರಣೆಯಿಂದ ಆಗಬಹುದಾದ ಮತ್ತಷ್ಟು ದೊಡ್ಡ ಅನಾಹುತಗಳು ತಪ್ಪಿತ್ತಾದ್ರು 300 ಕ್ಕೂ ಹೆಚ್ಚು ಕಾರ್ ಗಳು ಸುಟ್ಟು ಹೋದ್ವು..

ಈ ಅಗ್ನಿ ಅವಘಗಡದಲ್ಲಿ ಕಾರ್ ಮಾಲೀಕರು ಮುಂದೇನು ಮಾಡುವುದು ಎಂಬ ಗೊಂದಲದಲ್ಲಿದ್ದಾರೆ.. ಹೀಗಾಗೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸಹಾಯವಾಣಿಯನ್ನ ಪ್ರಾರಂಭಿಸಿದ್ದಾರೆ.. ವಾಹನದ ನೊಂದಣಿ ಮತ್ತು ಚಾಲನಾ ಪತ್ರಗಳ ವಿವರಗಳನ್ನ ಪಡೆಯಲು ಬೇಕಾಗುವ ವಿಧಿ ವಿಧಾನಗಳನ್ನು ತಿಳಿದುಕೊಳ್ಳಲು ಸಾರಿಗೆ ಇಲಾಖಾ ವತಿಯಿಂದ ಪ್ರಾದೇಶಿಕ ಸಾರಿಗೆ ಕಚೇರಿ, ಯಲಹಂಕದಲ್ಲಿ ಸಹಾಯ ಕೇಂದ್ರವನ್ನ ಪ್ರಾರಂಭಿಸಲಾಗಿದೆ, ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 080-29729908, 29729909 ಮೊಬೈಲ್ 9449864050 ಆಗಿದೆ..

ತಮ್ಮ ಕಾರನ್ನ ಕಳೆದುಕೊಂಡವರು, ಈ ಕೇಂದ್ರದ ಉಪಯೋಗವನ್ನ ಪಡೆದುಕೊಳ್ಳಲು ಸೂಚಿಸಲಾಗಿದೆ.. ನಾಳೆಯಿಂದ ಈ ಸಹಾಯ ಕೇಂದ್ರವು ಕಾರ್ಯನಿರ್ವಹಿಸಲಿದೆ..

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...