ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದರು. ಅವರ ನಿವಾಸಕ್ಕೆ ತೆರಳಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರಕ್ಕೆ ಮಾಲಾರ್ಪಣೆ ಮಾಡಿ, ಅಂತಿಮ ನಮನ ಸಲ್ಲಿಸಿದರು. ಅಲ್ಲದೇ ಅವರ ಪತ್ನಿ, ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಾಂತ್ವಾನ ಹೇಳಿದರು. ಈ ಬಳಿಕ ಮಾತನಾಡಿದ ಅವರು, ಗುರುಲಿಂಗಸ್ವಾಮಿ ಒಬ್ಬ ಯುವ ಸ್ನೇಹಿತ. ಅವರ ಅಕಾಲಿಕ ನಿಧನ ದಿಭ್ರಮೆಯನ್ನು ಮೂಡಿಸಿದೆ. ಅವನನ್ನು ಸುಮಾರು 20 ವರ್ಷಗಳಿಂದ ಬಲ್ಲೆ. ರಾಮದುರ್ಗದ ಹಳ್ಳಿಯೊಂದರಲ್ಲಿರುವಂತ ಇವರ ಕುಟುಂಬಸ್ಥರು ಗೌರವಾನ್ವಿತರು ಎಂದರು. ಪತ್ರಿಕಾ ವೃತ್ತಿಯನ್ನು ಆರಂಭಿಸಿದಂತ ಇವರು, ಮೊದಲಿನಿಂದಲು ಪರಿಚಿತರು. ಸಮಾಜಕ್ಕೆ ಒಳಿತಾಗುವಂತ ಕೆಲಸ ಮಾಡಿದಂತ ಪತ್ರಕರ್ತರಾಗಿದ್ದರು. ಅವರು ಒಬ್ಬರೇ ಬೆಳೆಯಲಿಲ್ಲ, ಅವರೊಟ್ಟಿಗೆ ಅನೇಕರನ್ನು ಬೆಳಿಸಿದರು. ಪ್ರತಿನಿತ್ಯ ಎರಡು ಮೂರು ಜನರಿಗೆ ಸಹಾಯ ಮಾಡುತ್ತಿದ್ದರು. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯವರೆಗೆ ನನ್ನ ಜೊತೆಗೆ ಇದ್ದರು. ಬೆಳಿಗ್ಗೆ ಎದ್ದು ನೋಡಿದ್ರೇ.. ಹೀಗೆ ಅವರ ಅಕಾಲಿಕ ನಿಧನ ಕೇಳಿ ಶಾಕ್ ಆಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ದುಖ ಬರಿಸೋ ಶಕ್ತಿಯನ್ನು ಕೊಡಲಿ ಎಂದು ಹೇಳಿದ್ದಾರೆ.
Latest article
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಹೆಚ್.ಡಿ. ರೇವಣ್ಣ ಬಿಡುಗಡೆ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ...
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ.!
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ...
ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ: ಜಾಹೀರಾತು ವೈರಲ್ – ಏನಿದು ಪ್ರೇತ ಮದುವೆ?
ಮಂಗಳೂರು: ಕರಾವಳಿಯಲ್ಲಿ ಮೃತ ಯುವತಿಯ ಮದುವೆಗೆ, ಮೃತ ಯುವಕ ಬೇಕು ಅಂತ ಜಾಹೀರಾತು ನೀಡಿದ್ದು, ಸದ್ಯ ಈ ಜಾಹೀರಾತು ಎಲ್ಲೇಡೆ ವೈರಲ್ ಆಗಿದೆ. ಹೌದು. 30 ವರ್ಷಗಳ ಹಿಂದೆ ತೀರಿಹೋದ ಹೆಣ್ಣುಮಗುವಿಗೆ ಅದೇ...
lipitor 10mg without prescription order atorvastatin 40mg generic lipitor 40mg ca