ಹಾಸನಾಂಬೆ ಮುಂದೆ ಶಾಸಕರ ಹೈಡ್ರಾಮಾ : ಪ್ರೀತಂಗೌಡ ವಿರುದ್ದ ಆಕ್ರೋಶ

Date:

ಹಾಸನಾಂಭೆ ದೇವಸ್ಥಾನದ ಮುಂದೆ ನಿನ್ನೆ ಸಖತ್ ಹೈಡ್ರಾಮಾ ನಡೆದಿದೆ . ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮೈಸೂರಿನ ಚಾಮರಾಜ ಕ್ಷೇತ್ರದ ಸ್ವಪಕ್ಷೀಯ ಶಾಸಕ ನಾಗೇಂದ್ರ ಕೆಂಡಾಮಂಡಲರಾದ ಘಟನೆ ನಡೆದಿದೆ , ” ನಿಮ್ಮ ಶಾಸಕನ ದವಲತ್ತು ಹೆಚ್ಚು ದಿನ ನಡೆಯಲ್ಲ ರೀ, ನನಗೂ ಗೊತ್ತಿದೆ.. ” ಎಂದು ಕಿಡಿಕಾರಿದ್ದು , ಹಾಸನಾಂಬೆ ದೇವಾಲಯದಿಂದ ತೆರಳಿದ ಘಟನೆ ಭಾನುವಾರ ನಡೆದಿದೆ.

ಹಾಸನಾಂಬೆಯ ದರ್ಶನದ 11ನೇ ದಿನ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಸುಮಾರು ಒಂದರಿಂದ ಎರಡು ಲಕ್ಷ ಮಂದಿ ದರ್ಶನ ಪಡೆದಿದ್ದಾರೆ. ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ತಮ್ಮ ಕುಟುಂಬ ಸಮೇತ ದರ್ಶನಕ್ಕೆ ಬಂದ ವೇಳೆ ಒಂದು ಗಂಟೆಗೂ ಹೆಚ್ಚು ಕಾಲ ದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆ ಆಕ್ರೋಶಗೊಂಡ ಅವರು ಸ್ಥಳೀಯ ಶಾಸಕ ಪ್ರೀತಂ ಗೌಡಗೆ ಮೊಬೈಲ್ ಕರೆ ಮಾಡಿದ್ದಾರೆ. ಒಂದಲ್ಲ.. ಎರಡಲ್ಲ ಅನೇಕ ಬಾರಿ ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸಿದ ಹಿನ್ನೆಲೆ ನಾಗೇಂದ್ರ ಆಕ್ರೋಶಗೊಂಡಿದ್ದಾರೆ. ಕುಟುಂಬ ಸಮೇತ ಬಂದ ತಮಗೆ ಅಪಮಾನ ಮಾಡಿದ ಶಾಸಕರ ಮೇಲೆ ಕೆಂಡಾಮಂಡಲವಾಗಿ, ಕೂಗಾಡಿ ವಾಪಸ್ ಮೈಸೂರಿಗೆ ತೆರಳಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...