ಶ್ರೀರಂಗಪಟ್ಟಣದಲ್ಲಿ ನಾಳೆ ಸಾವಿರಾರು ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿದೆ. ನಿಮಿಷಾಂಬ ದೇಗಲದಿಂದ ಮೂಡಲ ಬಾಗಿಲು ಆಂಜನೇಯ ದೇಗುಲವರೆಗೆ ಬೃಹತ್ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ಕೈಗೊಂಡಿದ್ದಾರೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಸುತ್ತ ಬ್ಯಾರಿಕೇಡ್ ಅಳವಡಿಸಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಜೊತೆಗೆ ಬಾಂಬ್ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದ್ದು, ಹನುಮ ಮಾಲಾಧಾರಿಗಳು ಸಾಗುವ ದಾರಿಯಲ್ಲಿ ಸಿಸಿಟಿವಿ ಅಳವಡಿಸಿ ಖಾಕಿ ಕೋಟೆಯನ್ನೇ ನಿರ್ಮಿಸಲಾಗಿದೆ..