ವೀರ ಯೋಧರ ಪಾರ್ಥೀವ ಶರೀರ ಇಂದು ಹುಟ್ಟೂರಿಗೆ. ಇಂದು ಅಂತ್ಯ ಸಂಸ್ಕಾರ

admin
By admin
2 Min Read

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರವನ್ನು ಇಂದು ಅವರ ಹುಟ್ಟೂರಿಗೆ ರವಾನಿಸಲಾಗುತ್ತದೆ. ಈಗಾಗಲೇ ಧೀರ ಯೋಧರ ಪಾರ್ಥೀವ ಶರೀರವನ್ನು ಗೋವಾ ವಿಮಾನ ನಿಲ್ದಾಣಕ್ಕೆ ತರಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಡಗಿಸಿಟ್ಟಿದ್ದ ಗ್ರೇನೇಡ್ ಸ್ಪೋಟಗೊಂಡ ಪರಿಣಾಮ ಕರ್ನಾಟದ ಧೀರ ಯೋಧರಾದ ಗೋಕಾಕ್ ತಾಲ್ಲೂಕಿನ ಬಸಪ್ಪ ಪಾಟೀಲ್, ಹಾಗೂ ನವಲಗುಂದ ತಾಲ್ಲೂಕಿನ ಸೈದಾಪುರ ನಿವಾಸಿ ಹಸನ್ ಸಾಬ್ ಅವರು ಹುತಾತ್ಮರಾಗಿದ್ದರು. ಇದೀಗ ಅವರ ಪಾರ್ಥೀವ ಶರೀರ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇಂದು ಅವರನ್ನು ತಮ್ಮ ಹುಟ್ಟೂರಿಗೆ ತರಲಾಗುತ್ತದೆ ಎನ್ನಲಾಗಿದೆ.
ವೀರ ಯೋಧ ಬಸಪ್ಪ ಪಾಟೀಲ್ ಅವರ ಪಾರ್ಥೀವ ಶರೀರವನ್ನು ಹೊತ್ತು ಸಾಗಿರುವ ಯೋಧರ ತಂಡ ಬೆಳಗಾವಿಯ ಖನಗಾವಿಯತ್ತ ತರಲಾಗುತ್ತದೆ. ಇಲ್ಲಿ ಸಾರ್ವಜನಿಕ ದರ್ಶನಕ್ಕೆ ಇಟ್ಟು ಅನಂತರ ಅಂತಿಮ ವಿಧಿವಿಧಾನ ಗಳನ್ನು ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಇನ್ನು ಧೀರ ಯೋಧ ಅಸನ್ ಸಾಬ್ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟೂರಾದ ಧಾರವಾಡ ಜಿಲ್ಲೆಯ ಸೈದಾಪುರ ಗ್ರಾಮಕ್ಕೆ ರವಾನಿಸಲಾಗಿದೆ. ಕಾರ್ಗಿಲ್ ಸ್ಥೂಪದ ಬಳಿ ಯೋಧ ಅಸನ್ ಸಾಬ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಅನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ ಅವರ ಅಂತ್ಯ ಕ್ರೀಯೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

POPULAR  STORIES :

ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!

ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ

ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

Share This Article