ಹಾಸನದಲ್ಲಿ ಮುಂದುವರೆದ ಹಾರ್ಟ್ ಅಟ್ಯಾಕ್ ಪ್ರಕರಣಗಳು: ಹೃದಯಾಘಾತಕ್ಕೆ ಬಲಿಯಾದ ಬಾಣಂತಿ!

Date:

ಹಾಸನದಲ್ಲಿ ಮುಂದುವರೆದ ಹಾರ್ಟ್ ಅಟ್ಯಾಕ್ ಪ್ರಕರಣಗಳು: ಹೃದಯಾಘಾತಕ್ಕೆ ಬಲಿಯಾದ ಬಾಣಂತಿ!

ಹಾಸನ: ಹಾಸನ ಜಿಲ್ಲೆ ಹಾರ್ಟ್ ಅಟ್ಯಾಕ್ ಕೇಸ್ಗಳ ಹಾಟ್ಸ್ಪಾಟ್ ಆಗಿ ಬದಲಾಗಿದೆ. ಹಾಸನ ಜಿಲ್ಲೆ ಒಂದರಲ್ಲೇ ಕಳೆದ 40 ದಿನಗಳಲ್ಲಿ ಸಾಕಷ್ಟು ಕೇಸ್ ಗಳು ದಾಖಲಾಗುತ್ತಿವೆ. ಇದೀಗ ಹೃದಯಾಘಾತಕ್ಕೆ ಬಾಣಂತಿ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಕೊಮ್ಮೆನಹಳ್ಳಿಯವರಾದ ಹರ್ಷಿತಾ ಹೆಚ್. (22) ಮೃತ ದುರ್ಧೈವಿಯಾಗಿದ್ದು, ಬಾಣಂತನಕ್ಕಾಗಿ ಶಿವಮೊಗ್ಗ ಜಿಲ್ಲೆಯ ಆಯನೂರಿನ ತವರು ಮನೆಯಲ್ಲಿ ತಂಗಿದ್ದರು. ತಡರಾತ್ರಿ, ಹರ್ಷಿತಾ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಆತಂಕಗೊಂಡ ಅವರು, ತಕ್ಷಣ ತಮ್ಮ ಗಂಡನನ್ನು ಹಾಸನದಿಂದ ಕರೆಸಿಕೊಂಡಿದ್ದರು.
ಆದರೆ, ಎದೆನೋವಿನ ತೀವ್ರತೆ ಕಡಿಮೆಯಾಗದ ಕಾರಣ, ಬೆಳಗ್ಗೆ ಅವರನ್ನು ಆಯನೂರು ಆಸ್ಪತ್ರೆಗೆ ಕರೆದೊಯ್ಯಲು ಅಂಬ್ಯುಲೆನ್ಸ್ನಲ್ಲಿ ವ್ಯವಸ್ಥೆ ಮಾಡಲಾಯಿತು. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಹರ್ಷಿತಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...