ಹಾಸನದಲ್ಲಿ ಮುಂದುವರೆದ ಹಾರ್ಟ್ ಅಟ್ಯಾಕ್ ಪ್ರಕರಣಗಳು: ಹೃದಯಾಘಾತಕ್ಕೆ ಬಲಿಯಾದ ಬಾಣಂತಿ!

Date:

ಹಾಸನದಲ್ಲಿ ಮುಂದುವರೆದ ಹಾರ್ಟ್ ಅಟ್ಯಾಕ್ ಪ್ರಕರಣಗಳು: ಹೃದಯಾಘಾತಕ್ಕೆ ಬಲಿಯಾದ ಬಾಣಂತಿ!

ಹಾಸನ: ಹಾಸನ ಜಿಲ್ಲೆ ಹಾರ್ಟ್ ಅಟ್ಯಾಕ್ ಕೇಸ್ಗಳ ಹಾಟ್ಸ್ಪಾಟ್ ಆಗಿ ಬದಲಾಗಿದೆ. ಹಾಸನ ಜಿಲ್ಲೆ ಒಂದರಲ್ಲೇ ಕಳೆದ 40 ದಿನಗಳಲ್ಲಿ ಸಾಕಷ್ಟು ಕೇಸ್ ಗಳು ದಾಖಲಾಗುತ್ತಿವೆ. ಇದೀಗ ಹೃದಯಾಘಾತಕ್ಕೆ ಬಾಣಂತಿ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಕೊಮ್ಮೆನಹಳ್ಳಿಯವರಾದ ಹರ್ಷಿತಾ ಹೆಚ್. (22) ಮೃತ ದುರ್ಧೈವಿಯಾಗಿದ್ದು, ಬಾಣಂತನಕ್ಕಾಗಿ ಶಿವಮೊಗ್ಗ ಜಿಲ್ಲೆಯ ಆಯನೂರಿನ ತವರು ಮನೆಯಲ್ಲಿ ತಂಗಿದ್ದರು. ತಡರಾತ್ರಿ, ಹರ್ಷಿತಾ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಆತಂಕಗೊಂಡ ಅವರು, ತಕ್ಷಣ ತಮ್ಮ ಗಂಡನನ್ನು ಹಾಸನದಿಂದ ಕರೆಸಿಕೊಂಡಿದ್ದರು.
ಆದರೆ, ಎದೆನೋವಿನ ತೀವ್ರತೆ ಕಡಿಮೆಯಾಗದ ಕಾರಣ, ಬೆಳಗ್ಗೆ ಅವರನ್ನು ಆಯನೂರು ಆಸ್ಪತ್ರೆಗೆ ಕರೆದೊಯ್ಯಲು ಅಂಬ್ಯುಲೆನ್ಸ್ನಲ್ಲಿ ವ್ಯವಸ್ಥೆ ಮಾಡಲಾಯಿತು. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಹರ್ಷಿತಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...