ಶವದ ಮೇಲೆ ಅತ್ಯಾಚಾರ….! ಹಾವೇರಿ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್….!

Date:

ಹಾವೇರಿ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ‌. ಆಕೆಯನ್ನು ಕೊಂದು ಶವದ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬ ಆಘಾತಕಾರಿ ಅಂಶ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ರೇಣುಕಾ ಪಾಟೀಲ (17) ಹೆಣವಾಗಿ ಸಿಕ್ಕ ನತದೃಷ್ಟೆ.‌ ಹಾವೇರಿಯ ಜಿಎಚ್ ಕಾಲೇಜಿನಲ್ಲಿ ಈಕೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿದ್ದಳು.ಆಗಸ್ಟ್ 6ರಂದು ಎಂದಿನಂತೆ ಕಾಲೇಜಿಗೆ ಹೋದ ಇವಳು ಸಂಜೆಯಾದರೂ ಮನೆಗೆ ಬರದಿದ್ದರಿಂದ ಸಹಜ ಆತಂಕಕ್ಕೆ ಒಳಗಾದ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಬಳಿಕ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೇಣುಕಾಗೆ ಹುಡುಕಾಟ ನಡೆಸಿದ್ದರು‌ ವರದಹಳ್ಳಿ ಗ್ರಾಮದ ಸೇತುವೆ ಬಳಿ ಗುರುವಾರ ರೇಣುಕಾ ಶವ ಅರೆ ಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ಈ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಗ್ರಾಮದ ಸಹೋದರ ಸಂಬಂಧಿಯೇ ಈ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿದೆ. ಶಶಿ ಅಲಿಯಾಸ್ ಮಂಜನಗೌಡ ಪಾಟೀಲ(28) ಆರೋಪಿ.
ರೇಣುಕಾಳನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಕೆ ವಿರೋಧ ವ್ಯಕ್ತಪಡಿಸಿದಾಗ ಹೊಡೆದು ಕೊಲೆ ಮಾಡಿದ್ದಾನೆ‌. ಬಳಿಕ ಆಕೆಯ ಶವದ ಮೇಲೆ ಅತ್ಯಾಚಾರ ಎಸಗಿದ್ದಾನೆ…!
ಶವದ ಮೇಲೆ ಕಾಮತೃಷೆ ತೀರಿಸಿಕೊಂಡ ನಂತರ ವರದ ಹಳ್ಳಿ ಸೇತುವೆ ಬಳಿ ಸುಟ್ಟು ಹಾಕಲು ಯತ್ನಿಸಿದ್ದಾನೆ. ಅರ್ಧಬಂರ್ಧ ಸುಟ್ಟು ಅಲ್ಲಿಂದ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...